The Public Spot
ರಾಜಕೀಯ

ಶಿವಾನಂದ ನೀಲಣ್ಣನವರ್‌ ಬಂಧನ ರಾಜಕೀಯ ಪ್ರೇರಿತ ಅಲ್ಲ..!

ಬೆಳಗಾವಿಯಲ್ಲಿ 4500 ಕೋಟಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಂಡಿದೆ. 35 ಸಾವಿರ ಜನರು ಹಣ ಹೂಡಿಕೆ ಮಾಡಿದ್ದು, ಬಹುತೇಕ ಜನರು ಆನ್‌ಲೈನ್‌ನಲ್ಲೇ ಪೇಮೆಂಟ್ ಮಾಡಿದ್ದಾರೆ. ಎರಡೂವರೆ ಸಾವಿರ ಕೋಟಿಗೂ ಅಧಿಕ ಹಣ ಆನ್‌ಲೈನ್‌ ಮೂಲಕ ಹೂಡಿಕೆ ಮಾಡಲಾಗಿದೆ. ಇಷ್ಟು ದೊಡ್ಡ ಮೊತ್ತದ ಹಣ ಹೂಡಿಕೆ ಆದ್ರೂ ಬ್ಯಾಂಕ್‌ನವರು ಸೈಲೆಂಟ್ ಆಗಿದ್ದಾರೆ. ಸದ್ಯ ಶಿವಾನಂದ ನೀಲಣ್ಣವರ್ ಬಳಸುತ್ತಿದ್ದ ನಾಲ್ಕು ಅಕೌಂಟ್ ಫ್ರೀಜ್ ಮಾಡಲಾಗಿದೆ.

ಬೆಳಗಾವಿಯಲ್ಲಿ ಹಣ ದುರುಪಯೋಗ ಪ್ರಕರಣ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ‌ ಪ್ರತಿಕ್ರಿಯೆ ಕೊಟ್ಟಿದ್ದು, ಅಧಿಕಾರಿಗಳು ಈ ವಿಚಾರವನ್ನ ಗಮನಕ್ಕೆ ತಂದಿದ್ದಾರೆ. 500 ಕೋಟಿ ಮೇಲಿನ ಅವ್ಯವಹಾರ ಆಗಿರೋದಕ್ಕೆ ಸಿಐಡಿಗೆ ವರ್ಗಾವಣೆ ಮಾಡಿದ್ದೇವೆ ಎಂದಿದ್ದಾರೆ. ಸಾವಿರಾರು ಕೋಟಿ ಅವ್ಯವಹಾರ ಇದೆ. ತನಿಖೆ ಮಾಡಿ ಮುಂದಿನ ಸ್ಟೇಪ್ ಸಿಐಡಿಯವರು ತಗೋತಾರೆ. ತನಿಖೆಯಲ್ಲಿ ಮತ್ತೆ ಯಾರ ಹೆಸರಿದೆ ಗೊತ್ತಾಗುತ್ತದೆ. ಇಷ್ಟು ದೊಡ್ಡ ಹಗರಣ ಆಗಿದೆ. ಇದು ರಾಜಕೀಯ ಪ್ರೇರಿತ ಅನ್ನೋದು ಸರಿಯಲ್ಲ. ಅವರು ಮಾಡುವ ಭಾಷಣ ನೋಡಿ ಹೀಗಾಯ್ತು. ಹಗರಣ ಆಗಿದ್ದು ನಿಜ, ಜಾಸ್ತಿ ಬಡ್ಡಿ ಕೊಡಲು ಸಾಧ್ಯವಿಲ್ಲ ಇವರು ಹೇಗೆ ಕೊಡ್ತಾರೆ..? ತನಿಖೆ ಬಳಿಕ ಎಲ್ಲಾ ವಿಚಾರ ಹೊರ ಬರಲಿದೆ ಎಂದಿದ್ದಾರೆ.

ಶಿವಾನಂದ ನೀಲಣ್ಣವರ ಬಹುಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ ಸಂಸದ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಂಸದ ಜಗದೀಶ ಶೆಟ್ಟರ್, ಸಿಕ್ಕಂತಹ ಸಾಕ್ಷ್ಯಗಳ ಆಧಾರದ ಮೇಲೆ ಕೇಸ್ ಮಾಡಿದ್ದಾರೆ. ಇವೆಲ್ಲವೂ ಅಂತಿಮವಾಗಿ ಕೋರ್ಟ್‌ನಲ್ಲಿ ನಿರ್ಧಾರ ಆಗಬೇಕಿದೆ. ಕೋರ್ಟ್‌ನಲ್ಲಿ ಇರುವುದರಿಂದ ಹೆಚ್ಚು ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಸಿಐಡಿ ಅಧಿಕಾರಿಗಳು ಹೇಗೆ ತನಿಖೆ ಮಾಡಿ, ಸಾಕ್ಷಿ-ಆಧಾರ ಸಂಗ್ರಹಿಸುತ್ತಾರೆ. ಅದರ ಮೇಲೆ ಪ್ರಕರಣದ ಬಗ್ಗೆ ಗೊತ್ತಾಗಲಿದೆ. ಆತನ ಬಗ್ಗೆ ಒಂದು ನಿರ್ಧಾರಕ್ಕೆ ಬರಲು ಸಾಧ್ಯ ಆಗಲಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಬಹುಕೋಟಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಿಷನರ್ ಭೂಷಣ್ ಬೊರಸೆ ಪ್ರಕರಣದ​​ ಬಗ್ಗೆ ಮಾಹಿತಿ ನೀಡಿದ್ದಾರೆ. ಬಹುಕೋಟಿ ವಂಚನೆಯ ಕೇಸ್ ಬಗ್ಗೆ ಶಿವಾನಂದ ನೀಲಣ್ಣವರನನ್ನು ಬಂಧಿಸಲಾಗಿದೆ. ಈ ಪ್ರಕರಣದ ವ್ಯಾಪ್ತಿ ಅಂತರ ರಾಜ್ಯಕ್ಕೂ ವ್ಯಾಪಿಸಿದ್ದು, 50 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಸಿಐಡಿ, ಡಿಐಜಿ ಭೀಮಾಶಂಕರ ಗುಳೇದ್ ಬಂದು ನಮ್ಮ ಬಳಿ ಮಾಹಿತಿ ಪಡೆದಿದ್ದಾರೆ. ನಾವು ಮಾಡಿರುವ ತನಿಖೆ ಮಾಹಿತಿಯನ್ನು ಅವರಿಗೆ ನೀಡಿದ್ದೇವೆ. ಅದರ ಆಧಾರದ ಮೇಲೆ ಸಿಐಡಿಗೆ ಕೇಸ್​​​ ವರ್ಗಾಯಿಸಿದ್ದೇವೆ. ಸಿಐಡಿ ಡಿಐಜಿ ಭೀಮಾಶಂಕರ ಗುಳೇದ್ ಅವರು ಫಾರ್ಮಾಲಿಟಿ ಮುಗಿಸಿದ್ದಾರೆ ಎಂದಿದ್ದಾರೆ.

ಇನ್ನು ಶಿವಾನಂದ ನೀಲಣ್ಣವರ್​ ಬಂಧನ ಬೆನ್ನೆಲ್ಲೇ, ಪೊಲೀಸರು ಅಲರ್ಟ್​ ಆಗಿದ್ದಾರೆ. ಶಿವಾನಂದ ನೀಲಣ್ಣವರ್​ ಹೆಸರಿಗೆ ಪೊಲೀಸರು ಬಣ್ಣ ಬಳಿಸಿದ್ದಾರೆ. ಕಡೂರು ಪೊಲೀಸ್ ಠಾಣೆಗೆ ಶಿವಾನಂದ ನೀಲಣ್ಣವರ್ ಬೋರ್ಡ್ ಅನ್ನು ಕೊಡುಗೆಯಾಗಿ ನೀಡಿದ್ರು. ಬೋರ್ಡ್​​ ಕೆಳ ಭಾಗದಲ್ಲಿ ಸಮಾಜ ಸೇವಕ ಶಿವಾನಂದ ನೀಲಣ್ಣವರ್ ಅಂತ ಬರೆಸಲಾಗಿತ್ತು. ಹೀಗಾಗಿ ಬೋರ್ಡ್​​ನ ಕೆಳಭಾಗದಲ್ಲಿ ನೀಲಣ್ಣವರ್ ಜಾಗಕ್ಕೆ ಸಹಾಯವಾಣಿ ಸಂಖ್ಯೆ ಹಾಕಲಾಗಿದೆ.

Related posts

ಮುಂದಿನ ಮುಖ್ಯಮಂತ್ರಿ ಯಾರು..? ಕಾಂಗ್ರೆಸ್‌ ನಾಯಕರೇ ಕುಮಾರಣ್ಣ ಎಂದಿದ್ಯಾಕೆ..?

Publicspot

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:

admin

ತ್ರಿಭಾಷಾ ಸೂತ್ರ ವಿಚಾರದಲ್ಲಿ ಕಾಂಗ್ರೆಸ್‌ ನಿಲುವು ಏನು..? ಹಿಂದಿ ಬೇಡ.. ಉರ್ದು ಬೇಕಾ..?

Publicspot

Cong MP Trouble: ಹಾಸನದ ಕಾಂಗ್ರೆಸ್​ ಸಂಸದನಿಗೆ ಸಂಕಷ್ಟ..! ಸುಪ್ರೀಂ ಶಾಕ್..

Publicspot

ಕಾಂಗ್ರೆಸ್‌ ಹೈಕಮಾಂಡ್‌ ದಿಕ್ಕು ತಪ್ಪಿದ ನಾವಿಕನಂತೆ ಆಗಿದ್ಯಾ..? ಮುಂದೇನು..?

Publicspot

ಮನರೇನಾ ಹೆಸರು ಬದಲಿಸದಂತೆ ಕಾಂಗ್ರೆಸ್‌ ಲೋಕಭವನ ಚಲೋ!

Publicspot