The Public Spot
ಅಪರಾಧ

ED RAID: ಕಾಂಗ್ರೆಸ್​ ಶಾಸಕನ ಮನೆ ಮೇಲೆ ED ರೇಡ್​.. ಸಿಕ್ಕಿಂನಲ್ಲಿ ಲಾಕ್​ ಆದ ವೀರೇಂದ್ರ ಪಪ್ಪಿ..

ಚಿತ್ರದುರ್ಗದ ಕಾಂಗ್ರೆಸ್​ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ( ED ) ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಪಪ್ಪಿ ನಿವಾಸ ಹಾಗೂ ಬೆಂಗಳೂರಿನ ವಸಂತನಗರದಲ್ಲಿರೋ ನಿವಾಸದ ಮೇಲೂ ದಾಳಿ ಮಾಡಿದ್ದು, ನಿನ್ನೆ ಶುಕ್ರವಾರ ಬೆಳಗ್ಗೆಯಿಂದಲೂ ಶೋಧ ಕಾರ್ಯಾಚರಣೆ ನಡೆಯುತ್ತಲೇ ಇದೆ. ಬೆಂಗಳೂರಿನ ವಸಂತನಗರದಲ್ಲಿ ಇರುವ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲೂ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಚಿತ್ರದುರ್ಗ ಸೇರಿದಂತೆ ಒಟ್ಟು 30 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವ್ಯವಹಾರಿಕವಾಗಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಶಂಕೆ ಇದ್ದು, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆನ್​ಲೈನ್​ ಗೇಮ್​ ಆ್ಯಪ್​ಗೂ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವ ಬಗ್ಗೆ ಶೋಧ ನಡೆಸುತ್ತಿದ್ದಾರೆ.

ಬೆಂಗಳೂರಿಂದ ಚಳ್ಳಕೆರೆ ನಿವಾಸಕ್ಕೆ ಕೆಸಿ ನಾಗರಾಜ್ ಆಗಮಿಸಿ ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದಾರೆ. ಶಾಸಕ ಕೆಸಿ ವೀರೇಂದ್ರ ಪಪ್ಪಿ ಅಣ್ಣ ಕೆ.ಸಿ ನಾಗರಾಜ್, ಇಡಿ ಅಧಿಕಾರಿಗಳ ಸೂಚನೆ ಮೇರೆಗೆ ನಿವಾಸಕ್ಕೆ ಆಗಮಿಸಿದ್ದಾರೆ. ಇನ್ನು ಸಹೋದರಿ ಕೂಡ ಮನೆ ಬಳಿಗೆ ಬಂದು ಒಳಕ್ಕೆ ಹೋಗಲು ಅವಕಾಶ ಸಿಗದೆ ವಾಪಸ್​ ಆಗಿದ್ದಾರೆ. ಶಾಸಕ ವೀರೇಂದ್ರ ನಿವಾಸದಲ್ಲಿ ಸಾಕಷ್ಟು ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದ್ದು, ಸಾಕಷ್ಟು ಆಸ್ತಿ ಪತ್ರಗಳೂ ಪತ್ತೆಯಾಗಿದೆ. ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದ್ದು, ಎಲ್ಲವನ್ನೂ ಸಿಕ್ರೇಟ್ ಲಾಕರ್​ನಲ್ಲಿ ಇರಿಸಿದ್ದರು ಎನ್ನಲಾಗಿದೆ. ದಾಳಿ ವೇಳೆ ಮನೆಯಲ್ಲಿ ವೀರೇಂದ್ರ ಪಪ್ಪಿ ತಾಯಿ ರತ್ನಮ್ಮ ಮಾತ್ರ ಮನೆಯಲ್ಲಿದ್ದರು ಎನ್ನಲಾಗಿದೆ.

ಚಿತ್ರದುರ್ಗ ಶಾಸಕ ಕೆ ಸಿ ವಿರೇಂದ್ರ ಪಪ್ಪಿಗೆ ಸಂಬಂಧಿಸಿದ ಉದ್ಯಮಗಳಾದ Ratna gold, Ratna multi source, Pappi technlogies, Pappi tour & travels, Pappi Bear box ಉದ್ಯಮಗಳಲ್ಲಿ ಅಕ್ರಮ ಹಣ ವ್ಯವಹಾರ ನಡೆದಿದೆ ಅನ್ನೋ ಮಾಹಿತಿ ಲಭಿಸಿದೆ. ECIR ದಾಖಲಿಸಿ ಕರ್ನಾಟಕ ಹಾಗೂ ಗೋವಾದ ಕಚೇರಿ, ನಿವಾಸ ಸೇರಿದಂತೆ ಸಾಕಷ್ಟು ಕಡೆ ದಾಳಿ ನಡೆದಿದೆ. ತಮ್ಮ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ ಗಳಿಗೆ ಅಕ್ರಮ ಹಣ ವರ್ಗಾವಣೆ ಸಂಬಂಧ ದಾಳಿ ಮಾಡಲಾಗಿದೆ ಅನ್ನೋದು ಗೊತ್ತಾಗಿದೆ. ಸಹೋದರ ನಾಗರಾಜ್, ತಿಪ್ಪೇಸ್ವಾಮಿ ಮನೆಯಲ್ಲೂ ನಿರಂತರ ಶೋಧ ನಡೆಯುತ್ತಿದೆ. ಶಾಸಕ ವೀರೇಂದ್ರ ಪಪ್ಪಿ ಸಂಬಂಧಿತ 30 ಕಡೆ ರೇಡ್ ಮಾಡಲಾಗಿದೆ.

ಸಿಕ್ಕಿಂನಲ್ಲಿದ್ದ ಶಾಸಕ ಕೆ ಸಿ ವೀರೇಂದ್ರ ಪಪ್ಪಿಯನ್ನು ವಶಕ್ಕೆ ಪಡೆದಿರುವ ED ಅಧಿಕಾರಿಗಳು, ವಿಚಾರಣೆ ನಡೆಸಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದ್ದು, ಸಿಕ್ಕಿಂನಿಂದ ಬೆಂಗಳೂರಿಗೆ ಕರೆ ತರುವ ಸಾಧ್ಯತೆಯಿದೆ. ಮತ್ತೊಂದು ಕಡೆ ಕುಸುಮಾ ಸಹೋದರ ಅನಿಲ್ ಗೌಡ ಮನೆಯಲ್ಲೂ ಶೋಧ ಮುಂದುವರಿದಿದೆ. ವೀರೇಂದ್ರ ಪಪ್ಪಿ ಮನೆಯಲ್ಲಿದ್ದ ಸಾಕಷ್ಟು ದಾಖಲೆಗಳನ್ನು ವಶಕ್ಕೆ ಒಡೆದಿರುವ ಜಾರಿ ನಿರ್ದೇಶನಾಲಯ aಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸಿ, ನಕಲು ಪ್ರತಿ ಪಡೆಯುತ್ತಿದ್ದಾರೆ. ಪೊಲೀಸರ ಭದ್ರತೆಯಲ್ಲಿ ಜೆರಾಕ್ಸ್ ಪ್ರತಿ ತೆಗೆಯುವ ಕೆಲಸ ಮಾಡಿದ್ದಾರೆ. ಶಾಸಕರಿಗೆ ಸೇರಿದ ಐಶಾರಾಮಿ ಕಾರುಗಳನ್ನೂ ಪರಿಶೀಲನೆ ಮಾಡಲಾಗಿದೆ. ಕಾರು ಒಳಭಾಗ, ಡಿಕ್ಕಿಯನ್ನೂ ಬಿಡದಂತೆ ಪರಿಶೀಲನೆ ಮಾಡಿದ್ದು, ಡಿಕ್ಕಿಯಲ್ಲಿ ಲಭ್ಯವಾದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

Related posts

Ananya Mother: ನಾನು ಸಾಯಲು ಸಿದ್ಧಳಿದ್ದೇನೆ.. ರಸ್ತೆಯಲ್ಲಿ ಬೆತ್ತಲೆ ನಿಲ್ತೇನೆ..!

Publicspot

ಜಿಮ್ ಟ್ರೈನರ್ ಮಾಡಿದ್ನಾ ಲವ್ ಜಿಹಾದ್..? ಯಾವುದು ಸತ್ಯ..?

Publicspot

ಧರ್ಮಸ್ಥಳ ಮೂಳೆ ರಹಸ್ಯ.. SIT ತನಿಖಾ ವರದಿ ಮತ್ತು ಅನುಮಾನದ ಹುತ್ತ..

Publicspot

ನಟ ದರ್ಶನ್​ಗೆ ಅನುಕೂಲ ಆಗುವಂತೆ ಸಾಕ್ಷಿ ಹೇಳಿದ್ರಾ ರೇಣುಕಾಸ್ವಾಮಿ ತಾಯಿ..!?

Publicspot

Lover Good Husband Bad; ಆನೇಕಲ್​ ಆಂಟಿ ವಾಪಸ್​ ಬಂದು ಗೊಳೋ ಅಂತಿರೋದ್ಯಾಕೆ..?

Publicspot

Sowjanya Case Reopen: ಸೌಜನ್ಯ ಕೇಸ್​ ರೀ ಓಪನ್​ ಆಗುತ್ತಾ..? ಸಾಧ್ಯತೆಗಳು ಇದ್ಯಾ..?

Publicspot