The Public Spot
ಅಪರಾಧ

Mandya Murder: ಮಗಳನ್ನು ಪ್ರೀತಿಸಿದ್ದಕ್ಕೆ ಕೊಂದೇ ಬಿಟ್ರಾ..?

ಮಂಡ್ಯ : ಅಪ್ರಾಪ್ತ ಬಾಲಕಿಯನ್ನು ಪೀತಿಸಿದ್ದಕ್ಕೆ ಯುವಕ ಹೆಣವಾದ್ನಾ ಅನ್ನೋ ಮಾತು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ಕೇಳಿ ಬರುತ್ತಿದೆ. ರಾಮಂದೂರು ಗ್ರಾಮದ ಕೆರೆ ಬಳಿ 21 ವರ್ಷದದ ಯುವ ಮಂಜು ಎಂಬಾತನ ಶವ ಸಿಕ್ಕಿದ್ದು, ಅಪಘಾತದಲ್ಲಿ ಮೃತಪಟ್ಟಿರುವಂತೆ ಬಿಂಬಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಯುವಕ ಮಂಜುನನ್ನೂ ಕೊಲೆಗೈದು ಅಪಘಾತವೆಂದು ಬಿಂಬಿಸಿದ್ದಾರೆ ಎನ್ನಲಾಗ್ತಿದೆ. ಮೃತ ಯುವಕನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮೃತಪಟ್ಟಿರುವ ಮಂಜು ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದ. ಇದೇ ಕಾರಣಕ್ಕೆ ಬಾಲಕಿ ಕುಟುಂಬಸ್ಥರೇ ಹತ್ಯೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಎರಡು ವರ್ಷದಿಂದ ಸಂಬಂಧಿಯೂ ಆಗಿರುವ ಅಪ್ರಾಪ್ತೆಯನ್ನ ಪ್ರೀತಿಸುತ್ತಿದ್ದ ಮೃತ ಮಂಜು. ಆಕೆಯನ್ನು 18 ವರ್ಷ ಪೂರ್ಣಗೊಂಡ ಬಳಿಕ ಮದುವೆ ಆಗಲು ನಿರ್ಧಾರ ಮಾಡಿಕೊಂಡಿದ್ದ. ಆ ಯುವತಿಯೂ ಮಂಜುನನ್ನೇ ಮದುವೆ ಆಗುವುದಾಗಿ ಬಿಗಿಪಟ್ಟು ಹಿಡಿದು, ಮಂಜು ಅಜ್ಜಿ ಮನೆಯಲ್ಲೇ ಉಳಿದುಕೊಂಡಿದ್ದಳು. ಅದೇ ಸಿಟ್ಟಿನಿಂದ ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.

ನಿನ್ನೆ ರಾಮಂದೂರಿನ ಕೆರೆಯಲ್ಲಿ ಮೀನು ಹಿಡಿಯಲು ಬಂದಿದ್ದ ಯುವಕ ಮಂಜು ಮೃತದೇಹ ಕೆರೆ ಪಕ್ಕದ ಹಳ್ಳದಲ್ಲಿ ಪತ್ತೆ ಆಗಿದೆ. ಆಟೋ ಪಲ್ಟಿಯಾಗಿ ಮೃತಪಟ್ಟಂತೆ ಸಿಕ್ಕಿದೆ ಯುವಕನ ಮೃತದೇಹ. ಆದರೆ ಈ ಸಾವಿನ ಬಗ್ಗೆ ಪೊಲೀಸರಲ್ಲೂ ಸಂಶಯ ವ್ಯಕ್ತವಾಗಿದ್ದು. ಕೊಲೆ ಮಾಡಿ ಆಟೋವನ್ನ ಹಳ್ಳಕ್ಕೆ ತಳ್ಳಿರುವ ಅನುಮಾನ ಮೂಡಿದೆ..

ಮೀನು ಹಿಡಿದು ಮನೆಗೆ ಹೊರಡುವಾಗ ಕುಟುಂಬಸ್ಥರು ಮುಂದೆ ಹೋಗಿದ್ದನ್ನು ನೋಡಿಕೊಂಡು ತಲೆಗೆ ಬಲವಾದ ಏಟು ಕೊಟ್ಟು ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಅಪಘಾತವೋ..? ಕೊಲೆಯೋ..? ಅನ್ನೋದು ಮರಣೋತ್ತರ ಪರೀಕ್ಷಾ ವರದಿ ಬಳಿಕ ಖಚಿತ ಆಗಬೇಕಿದೆ.

Related posts

BigBoss Ranjith Case; ಇರೋಕೆ ಮನೆ ಕೊಟ್ರೆ ನಂದೇ ಅಂದ್ರಂತೆ ನಟ ರಂಜಿತ್​..!!

Publicspot

Old Women Murder; ಕಜ್ಜಾಯ ಕೊಡ್ತೀನಿ ಬಾರಜ್ಜಿ ಎಂದವಳು ಕೊಂದು ಮೂಟೆ ಕಟ್ಟಿಟ್ಟಳು.. ಯಾಕೆ..?

Publicspot

ವರ್ಷದ ಹಿಂದೆ DOCTOR ಮದುವೆ.. 6 ತಿಂಗಳ ಹಿಂದೆ ಕೊಲೆ.. ಈಗ ರಹಸ್ಯ ಬಯಲು..!

Publicspot

Hassan Tragedy most of the Students Deaths: ಹಾಸನ‌ ದುರಂತದಲ್ಲಿ ಸತ್ತವರೆಲ್ಲಾ ಸ್ಟೂಡೆಂಟ್ಸ್​.. ಯಾಕೆ..?

Publicspot

Court Order bring Happy & Sad: ಕೋರ್ಟ್‌ ಆದೇಶದಿಂದ ಸಂತೋಷ ಜೊತೆಗೆ ದುಃಖ

Publicspot

Kolar malur MLA Case; ಕಾಂಗ್ರೆಸ್‌ ಶಾಸಕನ ಸ್ಥಾನ ಅನರ್ಹ.. ಸುಪ್ರೀಂಕೋರ್ಟ್‌ನಲ್ಲಿ ಸಿಗುತ್ತಾ ರಿಲೀಫ್..?

Publicspot