The Public Spot
ಅಪರಾಧ

Dharmasthala Twist; ಬುರುಡೆ ಹಿಂದೆ ಹೊರಟ SIT ಗೆ ಟ್ವಿಸ್ಟ್​ ಮೇಲೆ ಟ್ವಿಸ್ಟ್​..

ಧರ್ಮಸ್ಥಳ ಬುರುಡೆ ಕೇಸ್​ನಲ್ಲಿ ತಮಿಳುನಾಡು ಸಂಸದ, ಕರ್ನಾಟಕ ಕೇಡಾರ್​ನ ಮಾಜಿ ಐಎಎಸ್​ ಅಧಿಕಾರಿ ಸಸಿಕಾಂತ್​ ಸೆಂಥಿಲ್​ ಮೇಲೆ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಆರೋಪ ಮಾಡಿದ್ದರು. ಆದರೆ ಸಸಿಕಾಂತ್​ ಸೆಂಥಿಲ್​, ನನ್ನ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡಲಾಗಿದೆ. ನನಗೂ ಈ ಕೇಸ್​ಗೂ ಸಂಬಂಧವೇ ಇಲ್ಲ. ಎಂದು ಆರೋಪ ಮಾಡಿದ್ದ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್​ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಸೆಪ್ಟೆಂಬರ್ 11ರಂದು 42ನೇ ಎಸಿಎಂಎಂ ಕೋರ್ಟ್​ನಲ್ಲಿ ವಿಚಾರಣೆಗೆ ನಿಗದಿಯಾಗಿದೆ.

ಜನಾರ್ದನ ರೆಡ್ಡಿ ಕರ್ನಾಟಕದ ಪ್ರಾಪರ್ಟಿಯನ್ನ ಲೂಟಿ ಮಾಡಿದ ವ್ಯಕ್ತಿ. ಈಗಾಗಲೇ 7 ವರ್ಷ ಜೈಲು ಶಿಕ್ಷೆಗೆ ಒಳಗಾಗಿ, ಶಿಕ್ಷೆಗೆ ತಡೆಯಾಜ್ಞೆ ಪಡೆದು ಹೊರಗಿದ್ದಾರೆ. ಅಂಥಹ ವ್ಯಕ್ತಿ ನನ್ನ ಮೇಲೆ ಆರೋಪ ಮಾಡಿದ್ದಾರೆ. ನನಗೆ ಬುರುಡೆ ಬಗ್ಗೆ ಗೊತ್ತಿಲ್ಲ. ನನ್ನನ್ನ ಟಾರ್ಗೆಟ್ ಮಾಡಲಾಗ್ತಿದೆ ಎಂದು ಹೇಳಿದ್ದಾರೆ. ಆದರೆ ಜನಾರ್ದನ ರೆಡ್ಡಿ ಮಾತ್ರ ಸಸಿಕಾಂತ್​ ಸೆಂಥಿಲ್​ ಮೇಲೆ ಎಸ್​ಐಟಿ ವಿಚಾರಣೆ ಮಾಡ್ಬೇಕು ಎಂದು ಆಗ್ರಹ ಮಾಡಿದ್ದಾರೆ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರದ ಇರುವ ಕಾರಣಕ್ಕೆ ಸಸಿಕಾಂತ್​ ಸೆಂಥಿಲ್​ ವಿಚಾರಣೆ ಕಷ್ಟ ಸಾಧ್ಯ. ಹೀಗಾಗಿ ಈ ಪ್ರಕರಣವನ್ನು ಎನ್​ಐಎ ಅಥವಾ ಸಿಬಿಐ ತನಿಖೆ ಮಾಡುವುದು ಸೂಕ್ತ ಎಂದು ಒತ್ತಾಯ ಮಾಡಿದ್ದಾರೆ.

ಸೌಜನ್ಯ ಮಾವ ವಿಠಲ್​ ಗೌಡ ಚಿನ್ನಯ್ಯನೇ ಬುರುಡೆಯನ್ನು ತಂದಿದ್ದು ಎಂದು ಎಸ್​ಐಟಿ ಎದುರು ಒಪ್ಪಿಕೊಂಡಿದ್ದಾರೆ. ಆದರೆ ಆ ಬುರುಡೆ ತರುವಾಗ ಚಿನ್ನಯ್ಯನ ಜೊತೆಗೆ ನಾನಿದ್ದೆ ಎಂದಿರುವ ಕಾರಣಕ್ಕೆ ವಿಠಲ್​ ಗೌಡರನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ಎಲ್ಲಾ ಮಾಡಲಾಗಿದೆ. ತಲೆ ಬುರುಡೆ ತಂದಾಗ ದೇಹದ ಉಳಿದ ಭಾಗ ಎಲ್ಲಿದೆ..? ಅಸಲಿಗೆ ಆ ತಲೆ ಬುರುಡೆ ಯಾರದ್ದು..? ಅನ್ನೋ ಬಗ್ಗೆ ಎಸ್​ಐಟಿ ಟೀಂ ತನಿಖೆ ಮಾಡುತ್ತಿದೆ. ಈ ನಡುವೆ ಮಧ್ಯರಾತ್ರಿ ಆದರೂ SIT ಮತ್ತೆ ಕಚೇರಿಗೆ ಕರೆದುಕೊಂಡು ಬಂದು ವಿಚಾರಣೆ ಮುಂದುವರಿಸಿದೆ. ವಿಠಲ್​ ಗೌಡನ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ಸಂಗ್ರಹ ಆದರೆ ಬಂಧನ ಮಾಡಿದರೂ ಅಚ್ಚರಿಯೇನಿಲ್ಲ ಎನ್ನಲಾಗ್ತಿದೆ.

Related posts

Old Women Murder; ಕಜ್ಜಾಯ ಕೊಡ್ತೀನಿ ಬಾರಜ್ಜಿ ಎಂದವಳು ಕೊಂದು ಮೂಟೆ ಕಟ್ಟಿಟ್ಟಳು.. ಯಾಕೆ..?

Publicspot

Birthday party; ಹುಟ್ಟು ಹಬ್ಬದ ಪಾರ್ಟಿಯಲ್ಲಿ ಬಿಲ್ ಪೇ ಘರ್ಷಣೆ.. ಕೊಲೆಯಲ್ಲಿ ಅಂತ್ಯ..

Publicspot

ಅಪ್ರಾಪ್ತ ವಯಸ್ಸಲ್ಲಿ ಪ್ರೀತಿ.. ಪ್ರೇಮ.. ಇಷ್ಟೆ ಇಷ್ಟೆ.. ಎಚ್ಚರ ತಪ್ಪಿದ್ರೆ ಫಿನಿಷ್..!!

Publicspot

Insta Love: ಏಕಾಂತದ ಸರಸಕ್ಕೆ ಅಡ್ಡಿ ಅಂತಾ ಮಲ-ಮಗಳನ್ನೇ ಕೊಂದ ತಂದೆ ಅರೆಸ್ಟ್‌!

Publicspot

Court Order bring Happy & Sad: ಕೋರ್ಟ್‌ ಆದೇಶದಿಂದ ಸಂತೋಷ ಜೊತೆಗೆ ದುಃಖ

Publicspot

Dharmasthala Issue: ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಮತ್ತೆ ಎಡವಟ್ಟುಗಳು..

Publicspot