The Public Spot
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಹೆಕಮಾಂಡ್‌ಗೆ ಡೈನಾಮೇಟ್‌..

ರಾಜ್ಯ ರಾಜಕಾರಣದಲ್ಲಿ ನಾನಾ ನೀನಾ ಅನ್ನೋ ಫೈಟ್‌ ನಡೆಯುತ್ತಿದೆ. ಎರಡೂವರೆ ವರ್ಷದ ಬಳಿಕ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಪಟ್ಟು ಹಿಡಿದಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದ ಸಿಎಂ. ಸಿದ್ದರಾಮಯ್ಯ ಮಹತ್ವದ ಚರ್ಚೆ ನಡೆಸಿದ್ದಾರೆ. ಆಪ್ತ ಶಾಸಕರು, ಸಚಿವರನ್ನ ಬಿಟ್ಟು ಏಕಾಂಗಿಯಾಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ದ ಸಿದ್ದರಾಮಯ್ಯ ಹೈಕಮಾಂಡ್‌ಗೆ ಖಡಕ್‌ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗ್ತಿದೆ. ಖರ್ಗೆ ಭೇಟಿ ಬಳಿಕ ಮಾಧ್ಯಮಗಳ ಎದುರಲ್ಲೂ ಖಡಕ್‌ ಆಗಿ ಮಾತನಾಡಿ ಸಿಎಂ ಸಿದ್ದರಾಮಯ್ಯ, ಪಕ್ಷ ಸಂಘಟನೆ ಬಗ್ಗೆ ಮಾತಾಡಿದೆ, ಮುಂದಿನ ಚುನಾವಣೆ ತಯಾರಿ ಬಗ್ಗೆ ಚರ್ಚೆ ಆಯ್ತು. ನಾಯಕತ್ವ ಬದಲಾವಣೆ ಅನ್ನೋದೆಲ್ಲಾ ಊಹಾಪೋಹ. ನಾನು ಡಲ್ ಆಗೋದು ಇಲ್ಲ, ಅತಿ ಸಂತೋಷವಾಗಿಯೂ ಇರಲ್ಲ ಎಂದಿದ್ದಾರೆ.

ಮಲ್ಲಿಕಾರ್ಜುನ್ ಖರ್ಗೆ ಜೊತೆ ಸಿಎಂ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ನಿರ್ಣಯಕ್ಕೆ ಎಲ್ಲರೂ ಒಪ್ಪಬೇಕು. ಹೈಕಮಾಂಡ್ ನಿರ್ಣಯಕ್ಕೆ ನಾನು ಬದ್ದ ಎಂದಿರುವ ಸಿದ್ದರಾಮಯ್ಯ, ಹೈಕಮಾಂಡ್ ನಿರ್ಣಯವನ್ನ ನಾನು ಒಪ್ಪಬೇಕು, ಡಿ.ಕೆ ಶಿವಕುಮಾರ್ ಸಹ ಒಪ್ಪಬೇಕು. ಹೈಕಮಾಂಡ್‌ ನಾಯಕರು ಯಾವಾಗ ಕರೆಯುತ್ತಾರೋ ಆಗ ದೆಹಲಿಗೆ ಹೋಗ್ತೇನೆ ಎಂದಿದ್ದಾರೆ. ಜೊತೆಗೆ ಅಧಿಕಾರ ಹಸ್ತಾಂತರ ಅನ್ನೋದನ್ನು ನೀವೇ ಮಾಧ್ಯಮಗಳೇ ಹುಟ್ಟುಹಾಕಿರೋದು ಎಂದು ಗರಂ ಆಗಿದ್ದಾರೆ. ಇನ್ನೂ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಶಾಸಕರು ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟಿದ್ದು, ಹೈಕಮಾಂಡ್ ಹೇಳಿದ್ರೆ ನಾನೂ ಒಪ್ಪಿಕೊಳ್ಳಬೇಕು, ಡಿಕೆಶಿಯೂ ಒಪ್ಪಿಕೊಳ್ಳಬೇಕು. ಬೆಳಗ್ಗೆ ತಿಂಡಿ ತಿಂದೆ, ಊಟ ಮಾಡಿದ್ದೆ, ಸಾಯಂಕಾಲ ತಿಂಡಿ ತಿಂದೆ. ಖರ್ಗೆಯವರ ಮನೆಯಲ್ಲೂ ತಿಂಡಿ ತಿಂದೆ. ಬೋಂಡ ಮಾಡಿದ್ರು ತಿಂದೆ. ಡ್ರೈಪ್ರೂಟ್ಸ್ ಇಟ್ಟಿದ್ರು ತಿಂದೆ ಎಂದು ವ್ಯಂಗ್ಯವಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಕ್ಲೋಸ್ ಡೋರ್ ಮೀಟಿಂಗ್‌ನಲ್ಲಿ ನಾಯಕತ್ವ ಗೊಂದಲದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ ಮಾಡಿದ್ದು, ಇಬ್ಬರೂ ಪರಸ್ಪರ ಸಮನಯ್ವಯದಿಂದ ಹೋಗುವಂತೆ ಖರ್ಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಈ ವೇಳೆ ತಮ್ಮಿಂದ ಯಾವುದೇ ಗೊಂದಲ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಡಿ.ಕೆ ಶಿವಕುಮಾರ್ ಆಪ್ತರ ನಡೆ ವಿರುದ್ದ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದು, ದೆಹಲಿ ಪರೇಡ್ ಬಗ್ಗೆಯೂ ಪ್ರಸ್ತಾಪಿಸಿ ಸಿಎಂ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಸಿಎಂ ಬದಲಾವಣೆ ಆಗಬೇಕೆಂದು ಕೆಲವು ಶಾಸಕರು ಮಾತಾಡಿದ್ದಾರಂತೆ, ಅದಕ್ಕಾಗಿಯೇ ದೆಹಲಿಗೆ ಹೋಗಿದ್ದೇವೆ ಎಂದು ಹೇಳಿದ್ದಾರೆ. ಇದರಿಂದ ಸಾಕಷ್ಟು ಗೊಂದಲ ಆಗಿಬಿಟ್ಟಿದೆ ಎಂದಿದ್ದಾರೆ ಎನ್ನಲಾಗಿದೆ.

ಸಂಪುಟ ಪುನಾರಚನೆಗೂ ಅನುಮತಿ ಕೇಳಿದ ಸಿಎಂ ಸಿದ್ದರಾಮಯ್ಯ ಮಾತಿಗೆ ರಾಹುಲ್ ಗಾಂಧಿ ಜೊತೆ ಚರ್ಚೆ ಮಾಡಿ ತಿಳಿಸುವುದಾಗಿ ಖರ್ಗೆ ಹೇಳಿದ್ದಾರಂತೆ. ಆದರೆ ಕ್ಯಾಬಿನೆಟ್‌ ಪುನಾರಚನೆಗೂ ಹೈಕಮಾಂಡ್‌ ಒಪ್ಪಿಗೆ ಕೊಟ್ಟಿಲ್ಲ. ಅಧಿಕಾರ ಹಸ್ತಾಂತರದ ಬಗ್ಗೆಯೂ ಹೈಕಮಾಂಡ್‌ ಏನನ್ನೂ ಹೇಳಿಲ್ಲ. ಆದಷ್ಟು ದಿನ ಹೀಗೇ ತಳ್ಕೊಂಡು ಹೋಗುವ ಉದ್ದೇಶ ಹೊಂದಿರುವಂತೆ ಕಾಣ್ತಿದೆ. ಆದರೆ ನಾನು ಸಿಎಂ ಸ್ಥಾನದಿಂದ ಕೆಳಕ್ಕೆ ಇಳಿದರೆ ಸಾಕಷ್ಟು ಶಾಸಕರು ಬಂಡೇಳುವ ಸಾಧ್ಯತೆಯಿದೆ. ಎಲ್ಲಾ ಶಾಸಕರ ಜೊತೆಗೆ ಒಮ್ಮೆ ಚರ್ಚೆ ಮಾಡಿ. ಶಾಸಕರ ಅಭಿಪ್ರಾಯದಂತೆ ನಾವೆಲ್ಲರೂ ನಡೆಯೋಣ ಎಂದಿದ್ದಾರೆ ಎನ್ನಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಹೈಕಮಾಂಡ್‌ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಸಿದ್ದರಾಮಯ್ಯ ಸೂಚ್ಯವಾಗಿ ಹೇಳಿರುವ ಮಾತು ಹೈಕಮಾಂಡ್‌ ದಿಗಿಲುಗೊಳ್ಳುವಂತೆ ಮಾಡಿದ ಎನ್ನಬಹುದು.

Related posts

ಗ್ಯಾರಂಟಿಗೆ ಮಾರು ಹೋಗ್ಬೇಡಿ.. ಸಾವಿನ ಹತ್ತಿರ ಹೋಗಿ ಬಂದಿದ್ದೇನೆ.. ಇದು ಸತ್ಯ

Publicspot

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

admin

Congress Protest Vote Chori; ಮತಗಳ್ಳತನ ವಿರುದ್ಧ ಕಾಂಗ್ರೆಸ್‌ ತೀವ್ರ ಹೋರಾಟ..

Publicspot

ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ

admin

JDS ಪಾಲಿಗೆ GT ದೇವೇಗೌಡರದ್ದೇ ಚಿಂತೆ.. ಅತ್ಮ ಸಾಕ್ಷಿ ಅಂದ್ರೆ ಏನು..?

Publicspot

ಚಿತ್ತಾಪುರದಲ್ಲಿ RSS ಪಥ ಸಂಚಲನ VS ಭೀಮ್‌ ಆರ್ಮಿ ಫೈಟ್‌ ಸಂಚಲನ..!!

Publicspot