The Public Spot
ಅಪರಾಧ

ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದೂ ಹುಡುಗಿಗೆ ನಡೀತ ಲವ್ ಜಿಹಾದ್..!​

ಬೆಂಗಳೂರಿನಲ್ಲಿ ಲವ್ ಜಿಹಾದ್ ಅನ್ನೋ ದೊಡ್ಡ ಜಾಲವೇ ಸೃಷ್ಟಿಯಾಗಿದೆ ಅನ್ನೋ ಅನುಮಾನ ಮೂಡುವಂತಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಈ ಹುಡುಗಿ ತಾನಾಯ್ತು ತನ್ನ ಪಾಡಾಯ್ತು ಅಂತ ಬದುಕು ಕಟ್ಟಿಕೊಳ್ಳುವ ಕೆಲಸ ಮಾಡುತ್ತಿದ್ದಳು. ಈ ವೇಳೆ ಪರಿಚಯವಾದ ಉಸ್ಮಾನ್ ಎಂಬಾತ ಈ ಹುಡುಗಿ ಬಾಳಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ. ಪ್ರೀತಿಸುವಂತೆ ಹಿಂದೆ ಮುಂದೆ ಓಡಾಡಿ ಕಾಡಿ ಬೇಡಿ ಮನಸನ್ನು ಓಲೈಸಿಕೊಂಡ ಉಸ್ಮಾನ್​, ಧರ್ಮವನ್ನು ಮೀರಿದ ಪ್ರೇಮಿಗಳು ಅನ್ನೋ ತರ ಆಕೆಯನ್ನು ಮೋಹಿಸಿದ್ದ. ಆ ಬಳಿಕ ಮದುವೆ ಆಗದೆ ವಂಚಿಸಿದ್ದಾನೆ.

ನಮ್ಮಿಬ್ಬರ ಧರ್ಮ ಬೇರೆ ಬೇರೆ ಎಂದರೂ ಕೇಳದೆ ಆಕೆಯ ಮನವೊಲಿಸಿದ್ದ ಉಸ್ಮಾನ್​, ನನ್ನನ್ನ ಪ್ರೀತಿ ಮಾಡದಿದ್ದರೆ ಆತ್ಮಹತ್ಯೆಗೆ ಶರಣಾಗ್ತೀನಿ ಅಂತಾನು ಬೆದರಿಕೆ ಒಡ್ಡಿದ್ನಂತೆ. ಈತನ ಭಾವನಾತ್ಮಕ ಆಟವನ್ನು ಅರ್ಥ ಮಾಡಿಕೊಳ್ಳದ ಹುಡುಗಿ ಈತನ ಪ್ರೀತಿಗೆ ಗ್ರೀನ್‌ ಸಿಗ್ನಲ್‌‌ ಕೊಟ್ಟಿದ್ದಳು. ಆ ಬಳಿಕ ಒಂದೂವರೆ ವರ್ಷದಿಂದ ಇಬ್ಬರೂ ಲಿವ್ ಇನ್ ರಿಲೇಷನ್‌ಶಿಪ್​ನಲ್ಲಿ ಬದುಕಲು ಶುರು ಮಾಡಿದ್ದರು. ಕೆಲಸ ಕಾರ್ಯ ಏನೂ ಇಲ್ಲದೆ ಊರು ಬಸವನಂತೆ ತಿರುಗ್ತಿದ್ದವನು ಬ್ಯುಸಿನೆಸ್‌ ಮಾಡ್ತೀನಿ ಅಂತಾ 12 ಲಕ್ಷದ 20 ಸಾವಿರ ಹಣ ವಸೂಲಿ ಮಾಡಿದ್ದ. ಅಷ್ಟೇ ಅಲ್ಲದೆ ಚಿನ್ನಾಭರಣವನ್ನೂ ಕಿತ್ಕೊಂಡಿದ್ದ ಎಂದು ದೂರಿದ್ದಾರೆ.

ಹಣ, ಆಭರಣದ ಜೊತೆಗೆ ತನ್ನ ದೇಹವನ್ನೂ ಆತನ ಜೊತೆಗೆ ಹಂಚಿಕೊಂಡು ಇನ್ನೇನು ನಮ್ಮಿಬ್ಬರ ಮದುವೆ ಅಂತಾ ಕನಸು ಕಂಡಿದ್ದಳು. ಆದರೆ ಯಾವಾಗ ಹುಡುಗಿ ನಾವಿಬ್ಬರೂ ಮದುವೆ ಆಗೋಣ ಎಂದಾಗ ತನ್ನ ಕರಾಳ ಮುಖ ತೋರಿಸಲು ಶುರು ಮಾಡಿದ್ದ. ಮುಸ್ಲಿಂ ಧರ್ಮಕ್ಕೆ ಮತಾಂತರ ಆದರೆ ಮಾತ್ರವೇ ನಾನು ಮದುವೆ ಆಗುತ್ತೇನೆ ಎಂದಿದ್ದನಂತೆ. ಯಾವಾಗ ಯುವತಿ ತನ್ನ ಧರ್ಮವನ್ನು ಬಿಟ್ಟು ಬರುವುದಿಲ್ಲ ಎಂದಾಗ ಯುವತಿ ಮೇಲೆ ಹಲ್ಲೆ ಮಾಡಿದ್ದನಂತೆ. ಒಂದು ವೇಳೆ ಬಲವಂತವಾಗಿ ನನ್ನನ್ನು ಮದುವೆ ಆದರೆ ದೆಹಲಿಯಲ್ಲಿ ಮಾದರಿಯಲ್ಲಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿ ಇಡುತ್ತೇನೆ ಎಂದಿದ್ದನಂತೆ.

ದೆಹಲಿ ಮಾದರಿಯಲ್ಲಿ ಯುವತಿಯನ್ನೇ ಕೊಂದು 32 ಪೀಸ್ ಮಾಡ್ತೇನೆ. ಫ್ರಿಡ್ಜ್​ನಲ್ಲಿ ಇಡ್ತೀನಿ ಅಂತಾ ಬೆದರಿಸಿದ್ದು ಮಾತ್ರವಲ್ಲ, ಆಕೆಯ ಜೊತೆಗಿದ್ದ ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್​ಮೇಲ್ ಮಾಡಿದ್ನಂತೆ. ಎಲ್ಲಾ ಕಡೆಯಿಂದಲು ಸಿಕ್ಕಿಬಿದ್ದ ಯುವತಿ, ದಿಕ್ಕು ಕಾಣದಂತಾದಳು. ಆಗ ಸುದ್ದಗುಂಟೆ ಪಾಳ್ಯ ಸುದ್ದಗುಂಟೆ ಪಾಳ್ಯ ಪೊಲೀಸ್​ ಠಾಣೆ ಮಟ್ಟಿಲೇರಿದ್ದು, ನನಗೆ ನ್ಯಾಯ ಕೊಡಿಸಿ ಅಂತಾ ಕಣ್ಣೀರು ಹಾಕುತ್ತಿದ್ದಾಳೆ. ಆದರೆ ಪ್ರೀತಿ ಅನ್ನೋದು ಜಾತಿ, ಧರ್ಮ ಮೀರಿದ್ದು ಅಂತಾನೂ ಕೊಂಡಾಡ್ತಾರೆ.. ಆದರೆ ಈ ಉಸ್ಮಾನ್​ ಹೆಣ್ಣಿನ ಪ್ರೀತಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ದೇಹವನ್ನು ಬಳಸಿಕೊಂಡ ಬಳಿಕ ಮದುವೆ ಆಗಲು ನಿರಾಕರಿಸಿದ್ದಾನೆ. ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯಿಸಿದ್ದವನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ.

Related posts

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ದಿನಕ್ಕೊಂದು ಎಡವಟ್ಟು.. ನಿನ್ನೆ ಒಂದು.. ಇವತ್ತು ಒಂದು..

Publicspot

Court Order bring Happy & Sad: ಕೋರ್ಟ್‌ ಆದೇಶದಿಂದ ಸಂತೋಷ ಜೊತೆಗೆ ದುಃಖ

Publicspot

ಸಿಂಗರ್‌ ಮೈಲಾರಿಗೆ 14 ದಿನ ನ್ಯಾಯಾಂಗ ಬಂಧನ.. ರೇಪ್‌ ಬಗ್ಗೆ ಆತ ಹೇಳಿದ್ದೇನು..?

Publicspot

ಹೆಣ್ಣು ಮಗು ಬಲಿ; ಏಳು ವರ್ಷದ ಮಗುವನ್ನು ಕೊಂದೇ ಬಿಟ್ಟಳು ಮಲತಾಯಿ.. ಕಾರಣ ಗೊತ್ತಾ..?

Publicspot

ರೇಣುಕಾಸ್ವಾಮಿ ಕೇಸ್​ನಲ್ಲಿ ನಟ ದರ್ಶನ್​ ಪರ ವಕೀಲರ ಪ್ಲಾನ್ ಏನು..? ​

Publicspot

ದುಷ್ಚಟಕ್ಕೆ ದಾಸರಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್​ ಮಾಡಿದ್ದ ಗೆಳೆಯರು ಅಂದರ್!

Publicspot