ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದೆ. ಆನ್ಲೈನ್ ಗೇಮಿಂಗ್ ಆ್ಯಪ್ನಲ್ಲಿ ಅಕ್ರಮ ಹಣ ಹೂಡಿಕೆ ಮಾಡಿದ್ದ ಕೇಸ್ನಲ್ಲಿ ಬಂಧನ ಮಾಡಲಾಗಿತ್ತು. ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿ ಬಂಧನ ಮಾಡಿದ್ದರು.
ಶಾಸಕ ವಿರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್, ಇಬ್ಬರು ಶೂರಿಟಿ ಹಾಗೂ 10 ಲಕ್ಷ ರೂಪಾಯಿ ಬಾಂಡ್ ಕೊಡುವಂತೆ ಆದೇಶ ಮಾಡಿತ್ತು. ಜೊತೆಗೆ ಪ್ರಕರಣ ಮುಗಿಯೋವರೆಗೂ ದೇಶ ಬಿಟ್ಟು ಹೋಗುವಂತಿಲ್ಲ, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು. ಸಾಕ್ಷಿಗಳು ಮೇಲೆ ಪ್ರಭಾವ ಬೀರೋ ಹಾಗಿಲ್ಲ. ಈ ಎಲ್ಲಾ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಎಲ್ಲಾ ಷರತ್ತುಗಳನ್ನು ಪೂರೈಸಿದ ಶಾಸಕ ವಿರೇಂದ್ರ ಪಪ್ಪಿ ಜೈಲಿನಿಂದ ರಿಲೀಸ್ ಆಗಿದ್ದಾರೆ.

ಜೈಲಿಗೆ ಆದೇಶ ಪ್ರತಿ ತಲುಪಿದ ಬಳಿಕ ಶಾಸಕ ವೀರೇಂದ್ರ ಪಪ್ಪಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಯ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಹೊರ ಬಂದ ಶಾಸಕ ವೀರೇಂದ್ರ ಪಪ್ಪಿಯನ್ನು ಹೂವಿನ ಹಾರ ಹಾಕಿ ಅಭಿಮಾನಿಗಳು ಬರಮಾಡಿಕೊಂಡರು. ವೀರೇಂದ್ರ ಪಪ್ಪಿ ಪರವಾಗಿ ಘೋಷಣೆ ಕೂಗಿ ಸ್ವಾಗತಿಸಿದ್ದಾರೆ.

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರ ಮನೆ ಚಳ್ಳಕೆರೆ ಸೇರಿದಂತೆ ಚಿತ್ರದುರ್ಗ ಹಾಗೂ ಬೆಂಗಳೂರು ನಿವಾಸದ ಮೇಲೂ ದಾಳಿ ಮಾಡಲಾಗಿತ್ತು. ಅಕ್ರಮವಾಗಿ ಹಣ ವರ್ಗಾವಣೆ ಆಗಿರುವುದಕ್ಕೆ ಸಾಕ್ಷಿಯನ್ನೂ ಸಂಗ್ರಹಿಸಲಾಗಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿದ್ದು, ಬರೋಬ್ಬರಿ 4 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಶಾಸಕ ವೀರೇಂದ್ರ ಪಪ್ಪಿ ಜೈಲಿನಿಂದ ರಿಲೀಸ್ ಆಗಿದ್ದಾರೆ.


