The Public Spot
Uncategorized

ಲ್ಯಾಂಡ್‌ ಲಾರ್ಡ್‌ ಸಿನಿಮಾಗೆ ತೆರಿಗೆ ವಿನಾಯ್ತಿ ಕೊಟ್ಟ ರಾಜ್ಯ ಸರ್ಕಾರ!

ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಸಂವಿಧಾನದ ಆಶಯ, ಉಳ್ಳವರು ಬಡವರ ನಡುವಿನ ಸಂಘರ್ಷದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಜನರಿಂದ ಉತ್ತಮ ಮಾತುಗಳು ಕೇಳಿ ಬಂದಿದ್ದು, ಲ್ಯಾಂಡ್ ಲಾರ್ಡ್ ಚಿತ್ರಕ್ಕ ತೆರಿಗೆ ವಿನಾಯಿತಿ ನೀಡುವಂತೆ ದಲಿತ ಸಂಘಟನೆಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ತೆರಿಗೆ ವಿನಾಯಿತಿ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಸಿಎಂ ಸಿದ್ದರಾಮಯ್ಯ ಖಚಿತ ಪಡಿಸಿದ್ದಾರೆ.

ಲ್ಯಾಂಡ್ ಲಾರ್ಡ್ ಚಿತ್ರ ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ಚಿತ್ರವಾಗಿದ್ದು, ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾ ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ಇದು ಸಹಕಾರಿ ಆಗಲಿದೆ. ನಮ್ಮ ಸರ್ಕಾರದ ಈ ನಿರ್ಧಾರ ಮತ್ತಷ್ಟು ಉತ್ತಮ ಚಿತ್ರ ನಿರ್ಮಾಣಕ್ಕೆ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದಿದ್ದಾರೆ. ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದುನಿಯಾ ವಿಜಯ್ ಧನ್ಯವಾದ ತಿಳಿಸಿದ್ದಾರೆ. ತೆರಿಗೆ ವಿನಾಯಿತಿ ನೀಡುವಂತೆ ಮನವಿ‌ ಮಾಡಿದ್ದ ದಲಿತ ಸಂಘಟನೆಗಳಿಗೂ ಧನ್ಯವಾದ ತಿಳಿಸಿದ್ದಾರೆ.

ನಮ್ಮ ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಗೌರವಾನ್ವಿತ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ದಲಿತ ಸಂಘರ್ಷ ಸಮಿತಿಯ (DSS). ಹಿರಿಯ ಮುಖಂಡರಿಗೆ ನಮ್ಮ ಚಿತ್ರತಂಡದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಈ ಸಂದರ್ಭದಲ್ಲಿ ನಮ್ಮ ಜೊತೆಗಿದ್ದ ಅಣ್ಣ ಮಾವಳ್ಳಿ ಶಂಕರ್, ಸುಬ್ಬು ಹೊಲೆಯಾರ್, ಗೊಲ್ಲಹಳ್ಳಿ ಶಿವಪ್ರಸಾದ್, ಹುಲಿಕುಂಟೆ ಮೂರ್ತಿ, ಚಂದ್ರು ತರಹುಣಸೆ, ರವಿಕುಮಾರ್ ಈಚಲಮರ, ಹರೀಶ್ ಭೈರಪ್ಪ, ಮುರಳಿ ಕಾಟಿ ಹಾಗೂ ವಿಜಯಕುಮಾರ್ ಸೋನಾರೆ ಅವರಿಗೆ ನಾವು ಸದಾ ಚಿರಋಣಿ ಎಂದಿದ್ದಾರೆ. ಈ ಕಾರ್ಯ ನೆರವೇರಲು ಸಹಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಪ್ರಭಾಕರ್ ಹಾಗು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳಾದ ಡಾ. ನೆಲ್ಕುಂಟೆ ವೆಂಕಟೇಶಯ್ಯಗೂ ಧನ್ಯವಾದ ತಿಳಿಸಿದ್ದಾರೆ.

Related posts

Bihar Election Date; ಬಿಹಾರ ಚುನಾವಣೆಗೆ ದಿನಾಂಕ ಫಿಕ್ಸ್​..

Publicspot

Bihara Laddus; ಗೆದ್ದೇ ಗೆಲ್ಲುವ ವಿಶ್ವಾಸ.. ಸಮೀಕ್ಷೆಗಳೇ ಉಲ್ಟಾ ಆಗುತ್ತಾ..?

Publicspot

ಸುಪ್ರೀಂಕೋರ್ಟ್‌ನಲ್ಲಿ ತಾನೇ ವಾದ ಮಂಡಿಸಿದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ!

Publicspot

ಇರಾನ್​ಗೆ ವಾರ್ನಿಂಗ್​ ಮೇಲೆ ವಾರ್ನಿಂಗ್​ ಕೊಡ್ತಿರೋದ್ಯಾಕೆ ಅಮೆರಿಕ..?

Publicspot

ಸತ್ತ ಗಂಡನ ಜೊತೆಗೆ 10 ದಿನಗಳನ್ನು ಕಳೆದಳು ಪತ್ನಿ..!

Publicspot

Online Game And Betting Apps Law: ಭಾರತದಲ್ಲಿ ಆನ್​ಲೈನ್ ಗೇಮ್​..​ ಬೆಟ್ಟಿಂಗ್ ಆ್ಯಪ್​​ ​ ಕಾನೂನು ಜಾರಿ..

Publicspot