The Public Spot
ಅಪರಾಧ

ಬಿಕ್ಲು ಶಿವ ಕೊಲೆ ಕೇಸ್‌.. ಬಿಜೆಪಿ ಶಾಸಕ ಬೈರತಿ ಬಸವರಾಜು ಅರೆಸ್ಟ್‌

ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ‌ ಬೈರತಿ ಬಸವರಾಜ್‌ನನ್ನು ಬಂಧಿಸಲಾಗಿದೆ. ಇಷ್ಟು ದಿನಗಳ ಕಾಲ ಪೊಲೀಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ ಬೈರತಿ ಬಸವರಾಜು, ಸುಪ್ರೀಂಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದರಿಂದ ಅನಿವಾರ್ಯವಾಗಿ ಬೆಂಗಳೂರಿಗೆ ವಾಪಸ್‌ ಆಗಿದ್ದರು. ಗುಜರಾತ್‌ನ ಅಹಮದಾಬಾದ್‌ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಶಾಸಕ ಬೈರತಿ ಬಸವರಾಜ್‌ನನ್ನು ದೇವನಹಳ್ಳಿ ಎಸಿಪಿ ಹರ್ಷ ನೇತೃತ್ವದಲ್ಲಿ ಬಂಧಿಸಿ ಸಿಐಡಿ ತನಿಖಾಧಿಕಾರಿ ಮುಂದೆ ಹಾಜರು ಮಾಡಲಾಯ್ತು.

ರಾತ್ರಿ ವಶಕ್ಕೆ ಪಡೆದ ಸಿಐಡಿ ಎಸ್‌ಪಿ ಹರ್ಷ ಪ್ರಿಯಂವದ, ಪ್ರಾಥಮಿಕವಾಗಿ ಕೆಲವು ಮಾಹಿತಿ ಪಡೆದಿದೆ. ಕೇಸ್‌ ದಾಖಲು ಆದ ಬಳಿಕ ಯಾವ ಯಾವ ರಾಜ್ಯಗಳಿಗೆ ಹೋಗಿದ್ರಿ, ಯಾವಾಗ ಹೋಗಿದ್ರಿ..? ಅಂತಾ ಮಾಹಿತಿ ಪಡೆದಿದ್ದಾರೆ. ಇಂದು ವೈದ್ಯಕೀಯ ತಪಾಸಣೆ ಬಳಿಕ ಕೋರ್ಟ್‌ಗೆ ಹಾಜರು ಪಡಿಸಲಿರುವ ಸಿಐಡಿ ತಂಡ, ಹೆಚ್ಚಿನ ಚಿಕಿತ್ಸೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ. ಸುಪ್ರೀಂಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾವಾದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಬೈರತಿ ಬಸವರಾಜ್ ಬೆಂಗಳೂರಿಗೆ ವಾಪಸ್ ಆಗುವ ಮೂಲಕ ಬಂಧನಕ್ಕೆ ಒಳಗಾಗಿದ್ದಾರೆ.

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಆರೋಪಿ ಅಜಿತ್ ಜಾಮೀನು ಅರ್ಜಿಯೂ ವಜಾ ಆಗಿದೆ. ಜಾಮೀನು ಅರ್ಜಿ ವಜಾಗೊಳಿಸಿದ 82ನೇ ಸಿಸಿಹೆಚ್ ಕೋರ್ಟ್ ತಕ್ಷಣ ಶರಣಾಗಲು ಸೂಚನೆ ಕೊಟ್ಟಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ಬಳಿಕ CID ಪೊಲೀಸರು ಪ್ರಕರಣದ 20ನೇ ಆರೋಪಿಯಾಗಿದ್ದ ಅಜಿತ್ ಎಂಬಾತನನ್ನು ಅರೆಸ್ಟ್‌ ಮಾಡಿದ್ದಾರೆ. ವಕೀಲ ಅನ್ನೋ ಕಾರಣಕ್ಕೆ ನನ್ನನ್ನು ಬಂಧಿಸಿದ್ದಾ ಎಂದು ವಕೀಲ ಅಜಿತ್ ಆರೋಪಿಸಿದ್ದರು. ಹೀಗಾಗಿ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈಗ ಮಧ್ಯಂತರ ಜಾಮೀನು ತೆರವುಗೊಳಿಸಿ ಶರಣಾಗಲು ಸೂಚನೆ ಕೊಡಲಾಗಿತ್ತು.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ವಶಕ್ಕೆ ಪಡೆದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್‌‌ ಮಾತನಾಡಿದ್ದು, ಬೈರತಿ ಬಸವರಾಜ್ ಅವರು ಜುಆಮೀನು ಕೋರಿ ಕೋರ್ಟ್‌ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಹಾಕಿದ್ದರು. ಬಸವರಾಜುಗೆ ಎರಡು ಆಯ್ಕೆಗಳು ಇದ್ದವು. ಪೊಲೀಸರು ಬಂಧನ ಮಾಡುವುದು ಅಥವಾ ಬಸವರಾಜು ಅವರೇ ನೇರವಾಗಿ ಬಂದು ಶರಣಾಗತಿ ಆಗುವುದು. ಹೀಗಾಗಿ ಅಹ್ಮದಾಬಾದ್‌ನಿಂದ ಬೆಂಗಳೂರಿಗೆ ಬಂದು ಪೊಲೀಸರಿಗೆ ಶರಣಾಗಿದ್ದಾರೆ. ಮುಂದಿನ ಕ್ರಮ ಕಾನೂನಿನ ಅನ್ವಯ ಆಗಲಿದೆ ಎಂದಿದ್ದಾರೆ.

Related posts

Gang Rape; ಬೆಂಗಳೂರಲ್ಲಿ ಗ್ಯಾಂಗ್‌ ರೇಪ್‌.. ಮೂವರು ಆರೋಪಿಗಳ ಬಂಧನ.. ಇಬ್ಬರು ಎಷ್ಕೇಪ್‌

Publicspot

Lectuer – Student Love: ಮನೆಯಲ್ಲಿ ಮದುವೆ ತಯಾರಿ.. ಮಗಳು ಪ್ರಾಧ್ಯಾಪಕನ ಜೊತೆ ಪರಾರಿ..

ಯಶವಂತಿ

Online Game Murder; ಜೂಜಿನ ಚಟಕ್ಕೆ ಬಿದ್ದವನು ಕೊಲೆಗಾರನಾಗ ಕಥೆ.. ಬಾಡಿಗೆ ಮನೆ ದುರಂತ..

Publicspot

Girl Sale Like a Sex Toy; ಋತುಮತಿಯಾದ ಹೆಣ್ಣು.. ಪುರುಷತ್ವ ಹೆಚ್ಚಳ ಶಕ್ತಿ.. 20 ಲಕ್ಷಕ್ಕೆ ಬಾಲಕಿ ಮಾರಾಟ..!!

Publicspot

ಪ್ರೀತಿ ಮಾಡು.. ಇಲ್ಲದಿದ್ರೆ ನೋಡು.. ಇದು ಪ್ರೇಮಿಗಳ ದಿನದ ವಿಶೇಷ..

Publicspot

RAMYA REACTION: ನಟ ದರ್ಶನ್​ ಜೈಲಿಗೆ ಹೋಗಿದ್ದಕ್ಕೆ ರಮ್ಯಾ ಬೇಸರ.. ಟ್ರೋಲರ್ಸ್​ ಭೀತಿನಾ..?

Publicspot