September 14, 2026
The Public Spot
ದೇಶ-ವಿದೇಶ

LPG ತುಂಬಿದ 2 ಹಡಗು ತೆರಳಲು ಬಿಟ್ಟ ಭಾರತದ ಗೆಳಯ ಇರಾನ್‌..!

ಅಮೆರಿಕ-ಇಸ್ರೇಲ್‌ ಮೈತ್ರಿ ಪಡೆಗಳು ಇರಾನ್‌ ಮೇಲೆ ಯುದ್ಧ ಸಾರಿ ಕೆಟ್ಟಿವೆ ಎನ್ನುವ ಪರಿಸ್ಥಿತಿ ಎದುರಾಗಿದೆ. ಸಂಘರ್ಷ ಅಂತ್ಯವಾಗುವ ಲಕ್ಷಣಗಳು ಕಂಡುಬಂದಿಲ್ಲ. ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಅಲ್‌-ಖುದ್ಸ್‌ ಮೆರವಣಿಗೆ ವೇಳೆ ಸ್ಫೋಟ ಸಂಭವಿಸಿದೆ. ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ಯಾಲೆಸ್ತಿನಿಯರ ಬೆಂಬಲ ಒಗ್ಗಟ್ಟಿನ ವಾರ್ಷಿಕ ಱಲಿಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದ ವೇಳೆ ಸ್ಫೋಟ ಸಂಭವಿಸಿದೆ.

ಇರಾನ್ ಶರಣಾಗತಿ ಚರ್ಚೆ ನಡುವೆಯೂ ದಾಳಿ ನಡೆಯುತ್ತಲೇ ಇದೆ. ಇರಾನ್ ಶರಣಾಗಲಿದೆ ಅಂತ ಈಗಾಗಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಜಿ-7 ರಾಷ್ಟ್ರಗಳ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಆದರೆ ಇರಾನ್‌ ಸರ್ವೋಚ್ಛ ನಾಯಕ ಭಾರತೀಯ ಎರಡು ಹಡಗುಗಳು ಹರ್ಮೂಜ್‌ ಜಲಸಂಧಿ ಮೂಲಕ ತೆರಳಲು ಅವಕಾಶ ನೀಡಿದೆ. ಈ ವೇಳೆ ಭಾರತ ನಮ್ಮ ಸ್ನೇಹಿತ ಎಂದು ಹೇಳಿದೆ ಇರಾನ್‌. ಅದೇ ಕಾರಣಕ್ಕಾಗಿ ಭಾರತೀಯ ಎರಡು LPG ತುಂಬಿದ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

ಒಮಾನ್‌ನ ಸೋಹಾರ್ ನಗರದ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದು, 10 ಭಾರತೀಯರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ. ಅಲ್-ಅವಾಹಿ ಕೈಗಾರಿಕಾ ಪ್ರದೇಶದಲ್ಲಿ ಡ್ರೋನ್ ದಾಳಿ ನಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕೊಲ್ಲಿ ವಿಭಾಗದ ಹೆಚ್ಚುವರಿ ಕಾರ್ಯದರ್ಶಿ ಅಸೀಮ್ ಮಹಾಜನ್ ಮಾಹಿತಿ ನೀಡಿದ್ದಾರೆ. ಮಸ್ಕತ್ ಬಳಿಯ ಸೋಹಾರ್ ನಗರದಲ್ಲಿ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ನಾವು ತೀವ್ರವಾಗಿ ವಿಷಾದಿಸುತ್ತೇವೆ ಎಂದಿದ್ದಾರೆ.

ಲೆಬೆನಾನ್‌ ಮೇಲೆ ಇಸ್ರೇಲ್‌ ದಾಳಿ ಮಾಡಿದ್ದು, 100ಕ್ಕೂ ಹೆಚ್ಚು ಮಂದಿ ಮಕ್ಕಳು ಸಾವನ್ನಪ್ಪಿದ್ದಾರೆ. ಅದೇ ರೀತಿ ಇರಾಕ್‌ನಲ್ಲಿ ಅಮೆರಿಕ ಸೇನಾ ಪಡೆಯ ಜೆಟ್‌‌ ವಿಮಾನ ಪತನವಾಗಿದ್ದು, ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ. ಇದನ್ನು ಸ್ವತಃ ಅಮೆರಿಕ ಸೇನೆಯೇ ಒಪ್ಪಿಕೊಂಡಿದೆ. ಇದು ಇರಾನ್‌ ಮಾಡಿರುವ ಕೃತ್ಯ ಅಲ್ಲ ಎಂದಿರುವ ಅಮೆರಿಕ ಸೇನೆ, ಆಕಸ್ಮಿಕ ಘಟನೆ ಎಂದು ತಿಳಿಸಿದೆ. ಇಂಧನ ಭರ್ತಿ ಮಾಡುವಾಗ ದುರ್ಘಟನೆ ನಡೆದಿದೆ ಎನ್ನಲಾಗ್ತಿದೆ.

Related posts

Supreme Court on Waqf; ಕೇಂದ್ರದ ವಕ್ಫ್‌ ಕಾಯ್ದೆ ತಿದ್ದುಪಡಿಗೆ ಸುಪ್ರೀಂಕೋರ್ಟ್‌ನಲ್ಲಿ ಸಿಹಿ ಕಹಿ..

Publicspot

Stamped death; ತಮಿಳು ನಟ ವಿಜಯ್​​ Rally ಯಲ್ಲಿ ಕಾಲ್ತುಳಿತ.. 38 ಜನ ಸಾವು..!

Publicspot

ಇರಾನ್‌ ಸರ್ವೋಚ್ಛ ನಾಯಕ, ಇಸ್ರೇಲ್‌ ಪ್ರಧಾನಿ ಇಬ್ಬರೂ ಇಲ್ಲ.. ಏನಾದ್ರು..?

Publicspot

ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್‌..! ಕಾರಣ ಏನು..?

Publicspot

ಇರಾನ್​ಗೆ ವಾರ್ನಿಂಗ್​ ಮೇಲೆ ವಾರ್ನಿಂಗ್​ ಕೊಡ್ತಿರೋದ್ಯಾಕೆ ಅಮೆರಿಕ..?

Publicspot

Sugar Rate hike; ಸಕ್ಕರೆ MSP ದರ ಹೆಚ್ಚಳಕ್ಕೆ ಕೇಂದ್ರದ ಚಿಂತನೆ.. ಯಾರಿಗೆ ಲಾಭ..?

Publicspot