The Public Spot
ಅಂಕಣ

ಜಮೀರ್​​ ಅಖಾಡಕ್ಕೆ ಬಾರದಿದ್ದರೆ ಕಾಂಗ್ರೆಸ್​​ಗೆ ಸಂಕಷ್ಟ ಫಿಕ್ಸ್​..!

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರುತ್ತಿದೆ. ಈಗಾಗಲೇ ಅಬ್ಬರದ ಪ್ರಚಾರ ಮಾಡಲಾಗ್ತಿದೆ. ನಿನ್ನೆ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ಮಾಡಿದ್ದಾರೆ. ಇನ್ನು ದಾವಣಗೆರೆಯಲ್ಲಿ ಇವತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಆದರೆ ಕಾಂಗ್ರೆಸ್​ ನಾಯಕ ಜಮೀರ್​ ಅಹ್ಮದ್​ ಖಾನ್​​ ಪ್ರಚಾರ ಮಾಡುವುದು ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಸೇರಿದಂತೆ ಇಲ್ಲೀವರೆಗೂ ಜಮೀರ್​ ಅಹ್ಮದ್​ ಚುನಾವಣಾ ಅಖಾಡಕ್ಕೆ ಪ್ರವೇಶ ಪಡೆದಿಲ್ಲ. ಮುಸ್ಲಿಂ ಸಮುದಾಯ ಕಾಂಗ್ರೆಸ್​ ವಿರುದ್ಧ ಮುನಿದಿರುವ ಈ ಸಮಯದಲ್ಲಿ ಕಾಂಗ್ರೆಸ್​​ ಸಂಕಷ್ಟ ಅನುಭವಿಸುತ್ತಾ..? ಅನ್ನೋ ಶಂಕೆ ವ್ಯಕ್ತವಾಗ್ತಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಶಾಮನೂರು ಶಿವಶಂಕರಪ್ಪ ನನ್ನ ಬಳಿಕ ಮುಸ್ಲಿಮರು ಸ್ಪರ್ಧೆ ಮಾಡುವಂತೆ ಸೂಚಿಸಿದ್ರಂತೆ. ಹೀಗಾಗಿ ಸಾದಿಕ್​ ಪೈಲ್ವಾನ್​ ಈ ಬಾರಿ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದರು. ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್​​ ಶಾಮನೂರು ಕೂಡ ಟಿಕೆಟ್​ ಆಕಾಂಕ್ಷಿಯಾಗಿ ಕಾಂಗ್ರೆಸ್​ ಬಿ ಫಾರ್ಮ್​​ ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು. ಇದೀಗ ಸಾದಿಕ್​ ಪೈಲ್ವಾನ್​ ಕಣದಿಂದ ಹಿಂದೆ ಸರಿದಿದ್ದಾರೆ. ಆದರೆ ನಾಮಪತ್ರ ವಾಪಸ್​ ಪಡೆದಿಲ್ಲ. ಮುಸ್ಲಿಂ ಅಭ್ಯರ್ಥಿ ಆಗಿದ್ದ ಸಾದಿಕ್​ ಪೈಲ್ವಾನ್​ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್​ ಯಶಸ್ವಿಯಾಗಿದೆ. ಆದರೆ ಮುಸ್ಲಿಂ ಸಮುದಾಯ ಇನ್ನೂ 13 ಜನರು ಅಖಾಡದಲ್ಲಿದ್ದು, ಉಳಿದವರನ್ನು ಶಾಂತಗೊಳಿಸುವ​​ ಪ್ರಯತ್ನದಲ್ಲಿ ಕಾಂಗ್ರೆಸ್ ಇದೆ.

ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್​​ ಶಾಮನೂರು ಈ ಬಾರಿ ಗೆಲುವು ಕಂಡರೆ ಮುಂದಿನ ಒಂದು ಜನರೇಷನ್​ ಕಾಲ ಅಂದರೆ 50 ರಿಂದ 60 ವರ್ಷಗಳ ಕಾಲ ರಾಜಕಾರಣ ಮಾಡಲು ಅವಕಾಶ ಇದೆ. ಅಲ್ಲೀವರೆಗೂ ಮುಸ್ಲಿಂ ಸಮುದಾಯ ಸಮರ್ಥ್​​ ಶಾಮನೂರು ಬೆಂಬಲಿಸಿಕೊಂಡು ರಾಜಕಾರಣ ಮಾಡಬೇಕಿದೆ. ಇನ್ನೆಂದೂ ಟಿಕೆಟ್​ ಕೇಳುವ ಅವಕಾಶ ಸಿಗುವುದಿಲ್ಲ. ಹೀಗಾಗಿ ಈ ಬಾರಿ ಸಮರ್ಥ್​​ ಶಾಮನೂರು ಸೋಲಿಸಿದರೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್​ ಕೇಳಲು ಅವಕಾಶ ಸಿಗುತ್ತದೆ. ಸುಮಾರು 90 ಸಾವಿರದಷ್ಟು ಇರುವ ಮುಸ್ಲಿಂ ಮತದಾರರು ಈ ಬಗ್ಗೆ ಚಿಂತನೆ ಮಾಡ್ಬೇಕು ಅನ್ನೋದು ಮುಸ್ಲಿಂ ಸಮುದಾಯದ ನಾಯಕರ ಮಾತಾಗಿದೆ. ಆದರೆ ಜಮೀರ್​ ನಡೆ ಮೇಲೆ ಎಲ್ಲವೂ ನಿರ್ಧಾರ ಆಗಲಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮುಸ್ಲಿಮರಿಗೆ ಟಿಕೆಟ್​ ಕೇಳಿದ್ದ ಜಮೀರ್ ಅಹ್ಮದ್​ ಖಾನ್​, ಸಿಎಂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್​ ನಾಯಕರನ್ನು ಗಮನ ಸೆಳೆಯುವ ಕೆಲಸ ಮಾಡಿದ್ದರು. ಆಗ ಆಕ್ರೋಶ ಹೊರಹಾಕಿದ್ದ ಸಚಿವ ಎಸ್​.ಎಸ್​ ಮಲ್ಲಿಕಾರ್ಜುನ್​, ಜಮೀರ್​ ಅಹ್ಮದ್​ ನಮ್ಮ ಜಿಲ್ಲೆಯ ರಾಜಕಾರಣಕ್ಕೆ ಎಂಟ್ರಿ ಆಗಿದ್ಯಾಕೆ..? ಅವನಿಗೂ ದಾವಣಗೆರೆಗೂ ಏನು ಸಂಬಂಧ ಎಂದು ಏಕವಚನದಲ್ಲಿ ಮಾತನಾಡಿದ್ದರು. ಆ ಬಳಿಕ ಜಮೀರ್​ ಕೂಡ ತಿರುಗೇಟು ನೀಡುವ ಕೆಲಸ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಜಮೀರ್​ ಅಹ್ಮದ್​ ಬಳಿ ಪ್ರಚಾರಕ್ಕೆ ಬರುವಂತೆ ಸೂಚಿಸಿದ್ದು, ಜಮೀರ್​ ಪ್ರಚಾರಕ್ಕೆ ಬಾರದಿದ್ರೆ ಮುಸ್ಲಿಂ ಸಮುದಾಯಕ್ಕೆ ಬೇರೊಂದು ಸಂದೇಶ ರವಾನೆ ಆಗುವುದು ನಿಶ್ಚಿತ. ಆಗೊಂದು ವೇಳೆ ಮುಸ್ಲಿಂ ಸಮುದಾಯ ತಿರುಗಿಬಿದ್ದು ಮತಚಲಾಯಿಸಿದರೆ ಕಾಂಗ್ರೆಸ್​ ಸೋಲುವುದು ನಿಶ್ಚಿತ ಅನ್ನೋದು ಮತದಾರರ ಅಭಿಪ್ರಾಯ.

Related posts

Legends talks about S.L Byarappa; ಬಾನು ಮುಷ್ತಾಕ್‌ ಮನೆಯಲ್ಲಿ ವಾರ ಕಳೆದಿದ್ರಂತೆ S.L ಭೈರಪ್ಪ..

Publicspot

ಕೋಗಿಲು ಕ್ರಾಸ್​ ಡೆಮಾಲಿಷನ್​.. ಮಾನವೀಯತೆಯೋ..? ಮುಸ್ಲಿಂ ಅನ್ನೋ ಕಾರಣಕ್ಕೋ..?

Publicspot

Cricket and Politics; ಕ್ರೀಡೆ ಮತ್ತು ಸ್ನೇಹ.. ಕ್ರಿಕೆಟ್​ ಮತ್ತು ರಾಜಕೀಯ.. ಭಾರತ ತಪ್ಪು ಮಾಡಿದ್ದೆಲ್ಲಿ..?

Publicspot

Banu Musthaq Not So Great: ಬಾನು ಮುಷ್ತಾಕ್​ ದೊಡ್ಡವರಾಗಲು ಹೀಗೆ ಮಾಡಬೇಕಿತ್ತು..

Publicspot

ಧರ್ಮಸ್ಥಳ ಅಸ್ಥಿ ಶೋಧ.. ಏನೆಲ್ಲಾ ಆಗ್ತಿದೆ..? ಯಾರು ಏನಂದ್ರು..?

ಯಶವಂತಿ

ಗ್ಯಾರಂಟಿ ಕೊಡಲು ಸಾಧ್ಯವಾಗ್ತಿಲ್ವಾ..? ಇನ್ಮುಂದೆ ಗ್ಯಾರಂಟಿ ನಿಂತೇ ಹೋಗುತ್ತಾ..?

Publicspot