The Public Spot
ಅಪರಾಧ

ಅಪ್ಪನ ಕಡು ಕೋಪಕ್ಕೆ ನಡೀತು ಘನಘೋರ ಘಟನೆ.. ಅಯ್ಯೋ ಶಿವನೇ..

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನ ಪ್ರಗತಿಪುರದಲ್ಲಿ ಮಗ ಹೇಳದೆ ಕೇಳದೆ ಬೈಕ್ ತೆಗೆದುಕೊಂಡು ಹೋಗಿದ್ದ ಅನ್ನೋ ಕಾರಣಕ್ಕೆ ಮಗನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. 4 ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದ 45 ವರ್ಷದ ಆನಂದ್ ದೊಡ್ಡಮನಿ ಗಾರೆ ಕೆಲಸ ಮಾಡುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ಅದರಲ್ಲಿ 19 ವರ್ಷದ ಮಲ್ಲಿಕಾರ್ಜುನ್ ಅಪ್ಪನ ಜೊತೆಯಲ್ಲೇ ಟೈಲ್ಸ್ ಕೆಲಸಕ್ಕೆ ಹೋಗುತ್ತಿದ್ದ. ಮೇ 1 ರಂದು ಕಾರ್ಮಿಕ ದಿನಾಚರಣೆ ಪ್ರಯುಕ್ತ ಕೆಲಸಕ್ಕೆ ರಜೆ ಇದ ಕಾರಣ ಅಪ್ಪನ ಬೈಕ್ ತೆಗೆದುಕೊಂಡು ಮಗ ಮಲ್ಲಿಕಾರ್ಜನ್ ದೇವಸ್ಥಾನಕ್ಕೆ ಹೋಗಿದ್ದ.

ತನನ್ನು ಕೇಳದೆ ಬೈಕ್​ ತೆಗೆದುಕೊಂಡು ಹೋಗಿದ್ದಾನೆ ಎಂದು ಕೆರಳಿ ಕೆಂಡವಾಗಿದ್ದ ಆನಂದ್ ದೊಡ್ಡಮನಿ, ಮಗ ರಾತ್ರಿ ಮನೆಗೆ ವಾಪಸ್​ ಆದ ಕೂಡಲೇ ಜಗಳ ತೆಗೆದಿದ್ದ. ಆ ಸಮಯದಲ್ಲಿ ಬಾಟಲ್​ನಲ್ಲಿದ್ದ ಪೆಟ್ರೋಲ್ ತೆಗೆದು ಮಗನ ಮೇಲೆ ಎರಚಿದ್ದಾನೆ. ಆಗ ಪಕ್ಕದಲ್ಲೇ ಸೌಧೆ ಉರಿಯುತ್ತಿದ್ರಿಂದ ಯುವಕ ಮಲ್ಲಿಕಾರ್ಜುನ್​ಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇಕಡಾ 40ರಷ್ಟು ಸುಟ್ಟ ಗಾಯಗಳಿಂದ ಮಲ್ಲಿಕಾರ್ಜುನ್ ಆಸ್ಪತ್ರೆ ಸೇರಿದ್ದು, ಘಟನೆಗೆ ಕಾರಣವಾದ ಆನಂದ್ ದೊಡ್ಡಮನಿಗೂ ಶೇಕಡ 18ರಷ್ಟು ಸುಟ್ಟ ಗಾಯಾಗಳಾಗಿದ್ದು, ಇಬ್ಬರೂ ಆಸ್ಪತ್ರೆಯಲ್ಲಿ ಸಾವು ಬದುಕಿನ ಜೊತೆಗೆ ಹೋರಾಟ ಮಾಡುತ್ತಿದ್ದಾರೆ.

ಸದ್ಯ ತಂದೆ ಮಗ ಇಬ್ಬರೂ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಆರೋಪಿ ಸಂಬಂಧಿ ಆರ್ಮುಗಮ್ ಮಾತನಾಡಿ, ಮಗ ಮಲ್ಲಿಕಾರ್ಜುನ್ ಸರಿಯಾಗಿ ಕೆಲಸಕ್ಕೆ ಹೋಗ್ತಿರಲಿಲ್ಲ. ಸ್ನೇಹಿತರ ಜೊತೆಗೆ ಊರೂರು ಸುತ್ತುತ್ತಿದ್ದ. ಇದರಿಂದ ತಂದೆ ಮಗನ ನಡುವೆ ಜಗಳ ಸರ್ವೇ ಸಾಮಾನ್ಯವಾಗಿತ್ತು. ಬೈಕ್ ತೆಗೆದುಕೊಂಡು ಹೋಗಿದ್ದು ಜಗಳಕ್ಕೆ ಕೇವಲ ನೆಪ ಮಾತ್ರ ಎಂದು ತಿಳಿಸಿದ್ದಾರೆ.

ಮಗ 19 ವರ್ಷಕ್ಕೆ ಟೈಲ್ಸ್​ ಕೆಲಸಕ್ಕೆ ಹೋಗಿದ್ದಾನೆ. ಕಲಿಯಬಾರದ ದುಶ್ಚಟಗಳಿಗೆ ದಾಸನಾಗಿದೆ. ಅಪ್ಪನ ಜೊತೆಗೆ ಕೆಲಸಕ್ಕೆ ಹೋಗುವುದನ್ನು ಬಿಟ್ಟು ಸ್ನೇಹಿತರ ಜೊತೆಗೆ ಪೋಲಿ ಅಲೆಯುವುದನ್ನೇ ಕಾಯಕ ಮಾಡಿಕೊಂಡಿದ್ದಾನೆ. ನಾನು ದುಡಿದು ಮಗನನ್ನು ಸಾಕುತ್ತಿದ್ದೇನೆ. ದುಡಿಯಬೇಕಾದ ಮಗ ಊರೂರು ಸುತ್ತುತ್ತಿದ್ದಾನೆ ಎಂದು ಕೋಪಗ್ರಸ್ತನಾದ ತಂದೆ ಕೂಡ ಕಾನೂನು ಮೀರಿ ವರ್ತಿಸಿ ಆರೋಪಿ ಸ್ಥಾನದಲ್ಲಿ ನಿಂತಿದ್ದಾನೆ. ಮಕ್ಕಳು ಒಂದು ಹಂತಕ್ಕೆ ಬರುವ ತನಕ ತಂದೆ ತಾಯಿಗಳು ಬೆಳೆಸಿ ದೊಡ್ಡವರನ್ನಾಗಿ ಮಾಡಬೇಕು. ಆ ಬಳಿಕ ಸರಿದಾರಿಗೆ ಬಾರದಿದ್ರೆ ನಿನ್ನ ದಾರಿ ನೀನು ನೋಡಿಕೋ, ನನಗೂ ನಿನಗೂ ಸಂಬಂಧವಿಲ್ಲ ಎಂದು ಮನೆಯಿಂದ ಹೊರಹಾಕುವುದು ಉತ್ತಮ. ಇಲ್ಲದಿದ್ರೆ ಕೋಪ ಏನನ್ನಾದರೂ ಮಾಡಿಸುತ್ತದೆ. ಕೊನೆಗೆ ಜೈಲು ಸೇರುವ ಅನಿವಾರ್ಯತೆಯೂ ಎದುರಾಗುತ್ತದೆ.

Related posts

ನಿನ್ನೆ ಆಯ್ತು.. ಇವತ್ತೂ ಕೊಲೆ ಕೇಸ್‌ ವಿಚಾರಣೆ.. ನಟ ದರ್ಶನ್‌ಗೆ ಢವಢವ..

Publicspot

ಮರ್ಯಾದೆಗಾಗಿ ಮಗಳಿಗೇ ವಿಷ ಉಣಿಸಿದ ಹೆತ್ತವರು.. ಅರೆಸ್ಟ್​..

Publicspot

ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದೂ ಹುಡುಗಿಗೆ ನಡೀತ ಲವ್ ಜಿಹಾದ್..!​

Publicspot

ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕನ ಸಾವಿಗೆ ಕಾರಣ ಏನು..? ಅದೂ ಕೂಡ ಈ ರೀತಿ ಸಾವಾ..?

Publicspot

You Tuber Sameer house Raid: ಸಮೀರ್​ ಬಗ್ಗೆ ಮಟ್ಟಣ್ಣವರ್​ ಕೊಟ್ಟ ಸ್ಪಷ್ಟನೆ ಏನು..?

Publicspot

ಗಂಡನ ಜೊತೆ ವಿರಸ.. ಪ್ರಿಯಕರನ ಜೊತೆ ಸರಸ.. ಕೊಂದು ಹೋದ ರಫೀಕ್‌..

Publicspot