The Public Spot
ಟ್ರೆಂಡ್

Bike Taxi Start: ರಾಜ್ಯದಲ್ಲಿ ಬೈಕ್​ ಟ್ಯಾಕ್ಸಿ ಸೇವೆಗೆ ಹೈಕೋರ್ಟ್​ ಅಸ್ತು.. ರಸ್ತೆ ಫೈಟ್​ ನಿಲ್ಲಿಸಲಿ ಖಾಕಿಪಡೆ..

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಗಸ್ಟ್​ 21ರಿಂದ ಬೈಕ್ ಟ್ಯಾಕಿ ಸೇವೆ ಪುನರ್ ಆರಂಭ ಆಗಿದೆ. ಆಟೋ ಮತ್ತು ಕ್ಯಾಬ್​ಗಳಿಗೆ ದುಬಾರಿ ಹಣ ನೀಡಲು ಆಗದೆ ಪರದಾಡುತ್ತಿದ್ದ ಜನರಿಗೆ ತುಸು ನೆಮ್ಮದಿ ಸಿಕ್ಕಂತಾಗಿದೆ. ಓಲಾ ಹೊರತುಪಡಿಸಿ ಊಬರ್ ಹಾಗೂ ರ್ಯಾಪಿಡೊ ಆ್ಯಪ್​ಗಳಲ್ಲಿ ಮಾತ್ರ ಸೇವೆ ಲಭ್ಯ ಆಗುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ ಜೂನ್ 16 ರಿಂದ ಬೈಕ್ ಟ್ಯಾಕ್ಸಿ ಸೇವೆ ಬಂದ್​ ಮಾಡಲಾಗಿತ್ತು. ಒಂದು ತಿಂಗಳಲ್ಲಿ ಕಾನೂನು ರೂಪಿಸುವ ಬಗ್ಗೆ ನಿರ್ಧಾರ ಮಾಡಿ ಎಂದು ರಾಜ್ಯ ಸರ್ಕಾರಕ್ಕೂ ಹೈಕೋರ್ಟ್​ ನಿರ್ದೇಶನ ನೀಡಿತ್ತು. ಆದರೆ ಸರ್ಕಾರ ಯಾವುದೇ ನಿಲುವು ತೆಗೆದುಕೊಳ್ಳದ ಕಾರಣಕ್ಕೆ ಬೈಕ್​ ಟ್ಯಾಕ್ಸಿಗೆ ಹೈಕೋರ್ಟ್​ ಅಸ್ತು ಎಂದಿದೆ.

ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ತೀವ್ರ ಪಟ್ಟು ಹಿಡಿದಿದ್ದ ಖಾಸಗಿ ಸಾರಿಗೆ ಸಂಘಟನೆಗಳ ಒತ್ತಡಕ್ಕೆ ಮಣಿದಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ರಾಜ್ಯದಲ್ಲಿ ಬೈಕ್​ ಟ್ಯಾಕ್ಸಿ ಸೇವೆ ಬಂದ್​ ಮಾಡುವ ನಿರ್ಧಾರ ಮಾಡಿದ್ದರು. ಆ ಬಳಿಕ ಕೋರ್ಟ್​ನಲ್ಲೂ ಬೈಕ್​ ಟ್ಯಾಕ್ಸಿ ಚಾಲಕರಿಗೆ ಹಿನ್ನಡೆ ಆಗಿತ್ತು. ಅಂತಿಮವಾಗಿ ಮೇಲ್ಮನವಿ ಹೋದ ಬಳಿಕ ರಾಜ್ಯದಾದ್ಯಂತ ಬೈಕ್ ಟ್ಯಾಕ್ಸಿ ನಂಬಿಕೊಂಡಿದ್ದ 6 ಲಕ್ಷಕ್ಕೂ ಹೆಚ್ಚು ಸವಾರರ ಪರವಾಗಿ ಹೈಕೋರ್ಟ್​ ನಿರ್ಣಯ ಮಾಡಿದ್ದು ಸೆಫ್ಟೆಂಬರ್​ 22ರ ಒಳಗಾಗಿ ಬೈಕ್​ ಟ್ಯಾಕ್ಸಿಗೆ ಸಂಬಂಧಿಸಿದ ಕಾನೂನು ಮಾಡುವ ಬಗ್ಗೆ ನಿಲುವು ತಿಳಿಸಲು ಹೈಕೋರ್ಟ್​ ಸೂಚನೆ ಕೊಟ್ಟಿದ್ದು, ಬೈಕ್​ ಟ್ಯಾಕ್ಸಿಗೂ ಅಸ್ತು ಎಂದಿದೆ.

ಬೈಕ್ ಟ್ಯಾಕ್ಸಿ ಸಂಬಂಧಿಸಿದಂತೆ ನೀತಿ ನಿಯಮಗಳನ್ನು ಮಾಡಿ ಚೌಕಟ್ಟು ನಿಗದಿಪಡಿಸಲು ಹೈಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರಕ್ಕೆ ಸೂಚನೆ ಕೊಟ್ಟು ಸೆಪ್ಟೆಂಬರ್ 22 ಕ್ಕೆ ವಿಚಾರಣೆ ಮುಂದೂಡಿದೆ ಹೈಕೋರ್ಟ್. ಈಗಾಗಲೇ ಹೈಕೋರ್ಟ್​ ಆದೇಶದ ಅನ್ವಯ ರ್ಯಾಪಿಡೋ ಹಾಗೂ ಊಬರ್​ನಲ್ಲಿ ಬೈಕ್​ ಸೇವೆ ಆರಂಭ ಆಗಿದೆ. ಬೆಳಗ್ಗೆ ಎದ್ದು ಆಟೋಗೆ ನೂರು ರೂಪಾಯಿ ಕೊಡಬೇಕಲ್ಲ ಎಂದುಕೊಳ್ಳುವ ಮಧ್ಯಮ ಹಾಗೂ ಕೆಳವರ್ಗದ ಜನರು ಬೈಕ್​ಗಳಲ್ಲಿ ಓಡಾಡುವುದಕ್ಕೆ ಅನುಕೂಲ ಆಗಿದೆ.

Read | Mahesh Thimarodi Arrest: ಮಹೇಶ್‌ ತಿಮರೋಡಿ ಅರೆಸ್ಟ್‌.. ಕಾರಣ ಏನು ಗೊತ್ತಾ..?

ಆಟೋ ಚಾಲಕರು ಸುಖಾಸುಮ್ಮನೆ ಬೈಕ್​ ಓಡಿಸುವ ಜನರ ಮೇಲೆ ದಬ್ಬಾಳಿಕೆ ದೌರ್ಜನ್ಯ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಪೊಲೀಸರು ನಾಲ್ಕಾರು ಕಡೆ ಕಠಿಣ ಕ್ರಮ ತೆಗೆದುಕೊಳ್ಳುವ ಮೂಲಕ ಪುಂಡಾಟಕ್ಕೆ ಬ್ರೇಕ್​ ಹಾಕಬೇಕಿದೆ. ಒಬ್ಬರು ಹೋಗುವಾಗ ಬೈಕ್​ ಟ್ಯಾಕ್ಸಿಯಲ್ಲಿ ಹೋದರೆ ಆಟೋದವರಿಗೆ ಏನು ಸಮಸ್ಯೆ..? ಒಟ್ಟಾರೆಯಾಗಿ ಗ್ರಾಹಕರಿಗೆ ಅನುಕೂಲ ಆಗಬೇಕು. ಬೈಕ್​ ಟ್ಯಾಕ್ಸಿಯಿಂದ ಕಡಿಮೆ ಹಣ, ಮನೆ ಬಾಗಿಲಿಗೇ ಬಂದು ಹತ್ತಿಸಿಕೊಳ್ತಾರೆ. ಅಲ್ಲಿಗೆ ಬರಲ್ಲ, ಇಲ್ಲಿಗೆ ಬರಲ್ಲ ಅಂತಾ ಹೇಳಲ್ಲ. ಕಡಿಮೆ ಅವಧಿಯಲ್ಲಿ ಜನರನ್ನು ತಮ್ಮ ಸ್ಥಳಕ್ಕೆ ತಲುಪಿಸುತ್ತಾರೆ. ಇಷ್ಟೆಲ್ಲಾ ಅನುಕೂಲ ಇರುವ ಸೇವೆ ಬಂದ್​ ಮಾಡುವುದರಲ್ಲಿ ಅರ್ಥವಿಲ್ಲ ಎನ್ನುವುದು ಹೈಕೋರ್ಟ್​ಗೂ ಮನವರಿಕೆ ಆದ ಬಳಿಕವಷ್ಟೇ ಅನುಮತಿ ಕೊಟ್ಟಿರುವುದು. ಇದನ್ನು ಜಾರಿ ಮಾಡುವ ಹೊಣೆ ಪೊಲೀಸರ ಮೇಲಿದೆ.

Related posts

Today Blood moon: ರಕ್ತ ಚಂದ್ರಗ್ರಹ.. ಎಲ್ಲೆಲ್ಲಿ ಕಾಣುತ್ತೆ..? ಏನಿದ್ರ ವಿಶೇಷ..

Publicspot

ಜೈಲಿನಲ್ಲಿ ಇನ್ಮುಂದೆ ಕೈದಿಗಳಿಗೆ ಸಂಕಷ್ಟ ಫಿಕ್ಸ್​.. ಅಖಾಡಕ್ಕೆ ಖಡಕ್​ ಅಲೋಕ್ ಎಂಟ್ರಿ..​

Publicspot

ಚಂದ್ರಗ್ರಹಣ ಬರಿಗಣ್ಣಿನಿಂದಲೇ ನೋಡಿ.. ಇದೆಲ್ಲವೂ ಸೃಷ್ಟಿಯ ಅಚ್ಚರಿಗಳು..

Publicspot

RSS ಪಥಸಂಚಲನ.. ಸಸ್ಪೆಂಡ್​ಗೆ ಆಕ್ರೋಶ.. ಇವತ್ತು ಮತ್ತೆ ಪಥಸಂಚಲನ ಸಂಚಲನ..!

Publicspot

AIBE 20 ಪರೀಕ್ಷೆಯ ಅಡ್ಮಿಟ್‌ ಕಾರ್ಡ್‌ ರಿಲೀಸ್‌‌.. ಡೌನ್‌ಲೋಡ್‌ ಮಾಡೋದು ಹೇಗೆ..?

Publicspot

Mysore Dassara: ಈ ಬಾರಿ ದಸರಾ ಉದ್ಘಾಟನೆ ಮಾಡೋದು ಬೂಕರ್​ ಪುರಸ್ಕೃತೆ..! ಅನ್ಯಾಯ ಅಲ್ಲವೇ..?

Publicspot