The Public Spot
ಅಪರಾಧ

DARMASTHALA SIT ವರದಿ ಸಲ್ಲಿಸಿ: ಸದನದಲ್ಲಿ ಇವತ್ತು ಧರ್ಮಸ್ಥಳ ರಿಪೋರ್ಟ್.. ಏನಿದೆ..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ಅನಾಮಿಕ ಆರೋಪದ ಬಳಿಕ ರಾಜ್ಯ ಸರ್ಕಾರ SIT ರಚನೆ ಮಾಡಿ ಆದೇಶ ಮಾಡಿತ್ತು. ಆ ಬಳಿಕ ಪಾಯಿಂಟ್ 6 ಮತ್ತು ಪಾಯಿಂಟ್‌ 14ರಲ್ಲಿ ಎರಡು ಅಸ್ಥಿ ಪಂಜರ ಸಿಕ್ಕಿತ್ತು. ಅದನ್ನು‌ ಬಿಟ್ರೆ ಬೇರೆ ಕಡೆ ಅಸ್ಥಿಪಂಜರ ಸಿಗಲಿಲ್ಲ. ಈ ವಿಚಾರವಾಗಿ ರಾಜಕಾರಣ ಶುರುವಾಗಿದ್ದು, ಬಿಜೆಪಿ ನಾಯಕರು ಮಧ್ಯಂತರ ವರದಿಗೆ ಒತ್ತಾಯಿಸಿದ್ದಾರೆ. ಶನಿವಾರ ಕ ಮೂಲಕ ಧರ್ಮಸ್ಥಳಕ್ಕೆ ತೆರಳಿದ್ದ ಬಿಜೆಪಿ ನಾಯಕರು, ಭಾನುವಾರ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಪ್ರತಿಜ್ಞೆ ಮಾಡಿದ್ದರು.

ಕಾಂಗ್ರೆಸ್‌ ಕೂಡ ಧರ್ಮಸ್ಥಳ ಱಲಿ ಮಾಡಲು ಮುಂದಾಗಿದೆ. ಇವತ್ತು ವಿಧಾನಸಭಾ ಅಧಿವೇಶನದಲ್ಲಿ SIT ವರದಿ ಮಂಡಿಸುವ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಹೋಂ ಮಿನಿಸ್ಟರ್‌ ಪರಮೇಶ್ವರ್‌ ಈಗಾಗಲೇ ಮಾಹಿತಿ ನೀಡಿದ್ದಾರೆ. ತನಿಖಾ ತಂಡ ಈಗಾಗಲೇ ಪ್ರಾಥಮಿಕ ವರದಿಯನ್ನು ಎಸ್‌ಐಟಿ‌ ಮುಖ್ಯಸ್ಥರಿಗೆ ರವಾನೆ ಮಾಡಿದ್ದು, ಇವತ್ತು ಸದನ ಆರಂಭಕ್ಕೂ ಮುನ್ನವೇ ಖುದ್ದು ಎಸ್‌ಐಟಿ ಮುಖ್ಯಸ್ಥರು ಅಥವಾ ಡಿಜಿ ಐಜಿಪಿ‌‌ ಮೂಲಕ ವರದಿ ಗೃಹಸಚಿವ ಪರಮೇಶ್ವರ್‌ ಅವರ ಕೈ ಸೇರಲಿದೆ. ಆ ಬಳಿಕ ಇವತ್ತು ಧರ್ಮಸ್ಥಳ ವರದಿ ರಾಜ್ಯದ ಜನರ ಮುಂದೆ ಬಹಿರಂಗ ಆಗಲಿದೆ.

ಬಹುತೇಕ ಕಡೆ ಅಸ್ಥಿ ಪಂಜರ ಸಿಗದೆ ಇರುವ ಹಿನ್ನೆಲೆಯಲ್ಲಿ SIT ಅಧಿಕಾರಿಗಳು ಸದ್ಯ ಉತ್ಖನನ ಮಾಡುವುದನ್ನು ಕೈ ಬಿಟ್ಟು ವಿಚಾರಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವತ್ತೂ ಕೂಡ ವಿಚಾರಣೆಗೆ ಬರುವಂತೆ ದೂರುದಾರನಿಗೆ SIT ಅಧಿಕಾರಿಗಳು ಹೇಳಿದ್ದಾರೆ. ದೂರುದಾರ ಇನ್ನೂ ಎರಡು ಕಡೆ ಜಾಗ ತೋರಿಸುತ್ತೇನೆ ಎಂದು ಹೇಳಿದ್ದಾನೆ ಎನ್ನಲಾಗಿದೆ. ಇವತ್ತು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ಅಷ್ಟೇ ಮಾಡ್ತಾರಾ..? ಅಥವಾ ಯಾವುದಾದರೂ ಹೊಸ ಜಾಗಕ್ಕೆ ಕರೆದೊಯ್ದು ಭೂಮಿ ಅಗೆದು ಉತ್ಖನನ ಮಾಡ್ತಾರಾ..? ಅನ್ನೋ ಕುತೂಹಲ ಮೂಡಿಸಿದೆ.

ಬಿಜೆಪಿ ರಾಜಕಾರಣದಿಂದ ಕಾಂಗ್ರೆಸ್‌ ಸರ್ಕಾರ ಕೊಂಚ ಕಂಗಾಲಾಗಿರುವಂತೆ ಕಂಡು ಬರುತ್ತಿದೆ. ಹೀಗಾಗಿ ಧರ್ಮಸ್ಥಳದ ಪರವಾಗಿ ಬ್ಯಾಟಿಂಗ್‌ ಮಾಡ್ತಿರೋ ಕಾಂಗ್ರೆಸ್‌, ಧರ್ಮಸ್ಥಳದ ವಿರುದ್ಧ ಕೆಲವರು ಪಿತೂರಿ ಮಾಡಿದ್ದಾರೆ ಅಂತಾನೂ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಎಸ್‌ಐಟಿ ತನಿಖೆಯನ್ನು ಸರ್ಕಾರ ಹಿಂಪಡೆಯುವ ನಿರ್ಧಾರ ಮಾಡುತ್ತಾ ಅನ್ನೋ ಚರ್ಚೆಗಳು ಆರಂಭ ಆಗಿವೆ. ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್‌ ಧರ್ಮಸ್ಥಳದ ವಿರುದ್ಧ ಸಂಚು ಮಾಡಿದ್ದಾರೆ ಎಂದಿರುವುದು ಕ್ಲೀನ್‌ ಚಿಟ್‌ ಕೊಟ್ಟಂತೆ ಆಗಿದೆ. ರಾಜ್ಯ ಸರ್ಕಾರ ಮುಂದೇನು ಮಾಡಲಿದೆ ಅನ್ನೋ ಬಗ್ಗೆ ರಾಜ್ಯದ ಜನರ ಚಿತ್ತ ನೆಟ್ಟಿದೆ. ಇವತ್ತು ಬಹುತೇಕ ಮಧ್ಯಂತರ ವರದಿ ಮಂಡಿಸಿದ ಬಳಿಕ ಎಸ್‌ಐಟಿ ಭವಿಷ್ಯವೂ ನಿರ್ಧಾರ ಆಗಲಿದೆ.

Related posts

Hassan Ganesha Tragedy: ಹಾಸನದಲ್ಲಿ ಗಣೇಶ ಮೆರವಣಿಗೆ ದುರಂತ.. 9 ಸಾವು.. 20ಕ್ಕೂ ಹೆಚ್ಚು ಗಾಯ..

Publicspot

ನಗೆಯ ಪ್ರೀತಿಗೆ ಬಲಿಕೊಟ್ಟ ಪ್ರಿಯಕರ.. ಹುಡುಗಿ ಮಾಡಿದ್ದು ಒಂದೇ ತಪ್ಪು..

Publicspot

Online Game Murder; ಜೂಜಿನ ಚಟಕ್ಕೆ ಬಿದ್ದವನು ಕೊಲೆಗಾರನಾಗ ಕಥೆ.. ಬಾಡಿಗೆ ಮನೆ ದುರಂತ..

Publicspot

Gang Rape; ಬೆಂಗಳೂರಲ್ಲಿ ಗ್ಯಾಂಗ್‌ ರೇಪ್‌.. ಮೂವರು ಆರೋಪಿಗಳ ಬಂಧನ.. ಇಬ್ಬರು ಎಷ್ಕೇಪ್‌

Publicspot

Film Actress Case; ಲಿವ್‌ ಇನ್‌ ರಿಲೇಷನ್‌.. ಆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌.. ಕೋರ್ಟ್‌ನಲ್ಲಿ ಜಾಮೀನು..

Publicspot

Dating App: ಡೇಟಿಂಗ್​ ಆ್ಯಪ್​ನಲ್ಲಿ ಬಲೆ.. ಸುಲಿಗೆ ಮಾಡಿ ಹುಡುಗಿ ಎಸ್ಕೇಪ್​..

Publicspot