The Public Spot
ರಾಜಕೀಯ

ಮಣಿಪಾಲ್​ ಆಸ್ಪತ್ರೆಯಲ್ಲಿ ದೇವೇಗೌಡರನ್ನು ಭೇಟಿಯಾದ ಜಮೀರ್.. ಸ್ಪಷ್ಟನೆ..

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರಿಗೆ ಅನಾರೋಗ್ಯ ಉಂಟಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಮಧ್ಯಾಹ್ನ ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ, ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಆರೋಗ್ಯ ವಿಚಾರಿಸುವ ಉದ್ದೇಶದಿಂದಲೇ ದೆಹಲಿಯಿಂದ ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಬಂದಿದ್ದರು.

ದೇವೇಗೌಡರ ಆರೋಗ್ಯ ವಿಚಾರಿಸಿದ ಬಳಿಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿ, ದೇವೇಗೌಡರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಅನಾರೋಗ್ಯದ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಯಶಸ್ವಿ ಆಗಿದ್ದಾರೆ. ಯಾರು ಯಾವುದೇ ರೀತಿಯಲ್ಲಿ ಆತಂಕ ಪಡುವುದು ಬೇಡ ಎಂದಿದ್ದರು. ಆದರೆ ಕುಮಾರಸ್ವಾಮಿ ಭೇಟಿ ಮಾಡಿ ವಾಪಸ್​ ಆದ ಬೆನ್ನಲ್ಲೇ ಸಚಿವ ಜಮೀರ್​ ಅಹ್ಮದ್​ ಖಾನ್​​ ಮಣಿಪಾಲ್​ ಆಸ್ಪತ್ರೆಗೆ ಭೇಟಿ ನೀಡಿ ಗೌಡರ ಆರೋಗ್ಯ ವಿಚಾರಿಸಿದ್ದು, ಜೆಡಿಎಸ್​ ಕಾರ್ಯಕರ್ತರು ಹಾಗೂ ಗೌಡರ ಅಭಿಮಾನಿಗಳಿಗೆ ಆತಂಕ ಸೃಷ್ಟಿಸಿತ್ತು.

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಆರೋಗ್ಯ ಕುರಿತು ವದಂತಿಗೆ ಜೆಡಿಎಸ್ ಟ್ವಿಟ್ಟರ್​ (X Post) ಅಕೌಂಟ್​ನಿಂದ ಸ್ಪಷ್ಟನೆ ನೀಡಿದ್ದು, ಆತ್ಮೀಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ತಾವುಗಳು ಆತಂಕಪಡುವ ಆಗತ್ಯವಿಲ್ಲ. ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರವರು ಚೇತರಿಸಿಕೊಂಡು ಗುಣಮುಖರಾಗಿದ್ದಾರೆ. ಆರೋಗ್ಯವಾಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಡಿನ ಜನರ ಹಾರೈಕೆ, ಪ್ರೀತಿ, ಪ್ರಾರ್ಥನೆಯೇ ಅವರಿಗೆ ಶ್ರೀರಕ್ಷೆ ಆಗಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು X ಪೋಸ್ಟ್ ನಲ್ಲಿ ಮನವಿ ಮಾಡಿದ್ದಾರೆ. ಜನತೆಯ ಆಶೀರ್ವಾದ ಮತ್ತು ದೇವರನ್ನು ನಂಬಿರುವಂತವರು, ಹೀಗಾಗಿ ಅವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ಇನ್ನೂ ಮೂರು ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರುತ್ತಾರೆ. ಆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ ಎಂದಿದ್ದಾರೆ.

Related posts

ಬಳ್ಳಾರಿಯಲ್ಲಿ ಆಯ್ತು.. ಈಗ ಬೀದರ್ ಸರದಿ.. ರಾಜ್ಯದಲ್ಲಿ ಎತ್ತ ಸಾಗುತ್ತಿದೆ ರಾಜಕಾರಣ..?​

Publicspot

ಅಧಿಕಾರ ಹಸ್ತಾಂತರ ಬೆನ್ನಲ್ಲೇ ದಲಿತ ನಾಯಕರ ಒಗ್ಗಟ್ಟು.. ಯಾರು ಏನಂದ್ರು..?

Publicspot

BJP ಬಾಣವನ್ನು ಬಿಜೆಪಿಗೇ ತಿರುಗಿಸಿದ ಸಚಿವ ಕೃಷ್ಣಬೈರೇಗೌಡ..!

Publicspot

CM Finally; ಸಿಎಂ ಆಗಲು ಪಟ್ಟು ಹಿಡಿದು ಕುಳಿತ ಡಿ.ಕೆ ಶಿವಕುಮಾರ್​.. ಶಕ್ತಿ ವೃದ್ಧಿಗೆ ಸರ್ಕಸ್​..

Publicspot

Congress and Kannadigas; ಕನ್ನಡಿಗರ ಮೇಲಿನ ಪ್ರೀತಿಗಿಂತಾ ಅನ್ಯರೇ ಕಾಂಗ್ರೆಸ್ಗೆ ಮುಖ್ಯನಾ..?

Publicspot

ತ್ರಿಭಾಷಾ ಸೂತ್ರ ವಿಚಾರದಲ್ಲಿ ಕಾಂಗ್ರೆಸ್‌ ನಿಲುವು ಏನು..? ಹಿಂದಿ ಬೇಡ.. ಉರ್ದು ಬೇಕಾ..?

Publicspot