The Public Spot
ರಾಜ್ಯ

High Court News: ರಾಜ್ಯದಲ್ಲಿ ಮತ್ತೆ ರಸ್ತೆ ಇಳಿಯುತ್ತವೆ ಬೈಕ್​ ಟ್ಯಾಕ್ಸಿ..!?

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಬೈಕ್​ ಟ್ಯಾಕ್ಸಿ ಸೇವೆ ಕೊಡಲಾಗ್ತಿತ್ತು. ರ್ಯಾಪಿಡೋ, ಓಲಾ, ಊಬರ್​ ಸೇರಿದಂತೆ ಪ್ರಮುಖ ಆ್ಯಪ್​ ಆಧಾರಿತ ಸಂಸ್ಥೆಗಳು ಬೈಕ್​ ಮಾಲೀಕರನ್ನು ನೋಂದಣಿ ಮಾಡಿಕೊಂಡು ಕಡಿಮೆ ವೆಚ್ಚದಲ್ಲಿ ಗ್ರಾಹಕರಿಗೆ ಸೇವೆ ಸಿಗುವಂತೆ ಮಾಡಿದ್ದರು. ಬೈಕ್​ ಚಾಲಕರಿಗೂ ಇದರಿಂದ ಇಂಧನದ ಖರ್ಚು ವೆಚ್ಚ ಸರಿದೂಗಿಸಲು ಸಹಕಾರಿ ಆಗಿತ್ತು. ಆದರೆ ಆಟೋದವರ ವಿರೋಧ ಹೆಚ್ಚಾಗಿದ್ದಕ್ಕೆ ರಾಜ್ಯ ಸರ್ಕಾರ ಬೈಕ್​ ಟ್ಯಾಕ್ಸಿ ಬ್ಯಾನ್​ ಮಾಡುವ ನಿರ್ಧಾರ ಮಾಡಿತ್ತು.

https://thepublicspot.com/new-law-in-loksaba-opposition-abjecton-bill-moved-jpc/

ಈಗಾಗಲೇ ಬೈಕ್​ಗಳ ಅವಶ್ಯಕತೆ ಇದೆ ಎನ್ನುವುದಾದರೆ ಕಾನೂನು ರೂಪಿಸಿ ಎಂದು ಹೈಕೋರ್ಟ್​ ರಾಜ್ಯ ಸರ್ಕಾರಕ್ಕೆ ಸಲಹೆಯನ್ನೂ ನೀಡಿತ್ತು. ಆದರೆ ರಾಜ್ಯ ಸರ್ಕಾರ ಯಾವುದೇ ಕಾನೂನು ರೂಪಿಸುವ ಕೆಲಸ ಮಾಡಿರಲಿಲ್ಲ. ಇದೀಗ ಮತ್ತೊಮ್ಮೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸುವ ಬಗ್ಗೆ ನಿಲುವು ತಿಳಿಸಿ ಎಂದು ಹೈಕೋರ್ಟ್​ 1 ತಿಂಗಳ ಗಡುವು ನೀಡಿದೆ. ಬೈಕ್ ಟ್ಯಾಕ್ಸಿ ನಿಷೇಧ ಪ್ರಶ್ನಿಸಿ ಆಪರೇಟರ್​ಗಳು ಮೇಲ್ಮನವಿ ಸಲ್ಲಿಸಿದ್ದು, 13 ರಾಜ್ಯಗಳು ನಿಯಮ ರೂಪಿಸಿವೆ, ನೀವು ನಿಷೇಧಿಸಿದ್ದೀರಿ. ಈ ರೀತಿ ನಿಷೇಧ ಸರಿಯೇ ಎಂಬುದನ್ನು ಹೈಕೋರ್ಟ್ ಪರಿಶೀಲಿಸಲಿದೆ ಎಂದಿದೆ.

ಬೈಕ್ ಸಂಚಾರದಿಂದ ನಗರದಲ್ಲಿ ದಟ್ಟಣೆಯೂ ಉಂಟಾಗುವುದಿಲ್ಲ. ಕಾರು, ಆಟೋ ಸಂಚರಿಸದ ಕಡೆಯಲ್ಲೂ ಬೈಕ್ ಸಂಚರಿಸಬಹುದು. ಸರ್ಕಾರ ನೀತಿ ರೂಪಿಸುವುದಿದ್ದರೆ ಸಮಯ ನೀಡುತ್ತೇವೆ ಎಂದಿರುವ ಹೈಕೋರ್ಟ್​, ಜೀವನೋಪಾಯದ ಅಂಶವೂ ಅರ್ಜಿಯಲ್ಲಿ ಇರುವುದರಿಂದ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಲು ಸೂಚನೆ ಕೊಟ್ಟಿದೆ ರಾಜ್ಯ ಹೈಕೋರ್ಟ್. ಹೈಕೋರ್ಟ್ ಸಲಹೆಗೆ ಸರ್ಕಾರದ ಪರ ಅಡ್ವೊಕೇಟ್​ ಜನರಲ್​ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, 4 ವಾರದಲ್ಲಿ ಸರ್ಕಾರದ ನಿಲುವು ತಿಳಿಸುತ್ತೇವೆ ಎಂದಿದ್ದಾರೆ. ಸೆಪ್ಟೆಂಬರ್​ 22 ರ ಒಳಗೆ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ.

ಬೈಕ್​ ಟ್ಯಾಕ್ಸಿಯಿಂದ ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಸೇವೆ ಲಭ್ಯ ಆಗುತ್ತದೆ. ಅಷ್ಟೇ ಅಲ್ಲದೆ ಆಟೋ ಚಾಲಕರು ಕೇಳಿದಷ್ಟು ದುಡ್ಡು ಕೊಡುವುದು, ಡಬಲ್,​ ತ್ರಿಬಲ್​ ದರ ವಸೂಲಿ ಮಾಡುವುದು ತಪ್ಪುತ್ತದೆ. ಇನ್ನು ಒಬ್ಬರೇ ಗ್ರಾಹಕ ಇದ್ದಾಗ ಆಟೋದಲ್ಲಿ ಸಂಚಾರ ಮಾಡುವುದು ಕಷ್ಟ. ಮೂವರು, ಇಬ್ಬರು ಇದ್ದಾಗ ಆಟೋದಲ್ಲಿ ಹೋದರೆ ಅನುಕೂಲ ಆಗುತ್ತದೆ. ಆದರೆ ಬೈಕ್​ನಲ್ಲಿ ಒಬ್ಬರನ್ನೇ ಕೂರಿಸಿಕೊಂಡು ಹೋಗುವದರಿಂದ ಆಟೋದವರಿಗೆ ಯಾವುದೇ ನಷ್ಟವೂ ಇಲ್ಲ. ಸರ್ಕಾರ ಈ ಬಗ್ಗೆ ನೂತನ ಕಾನೂನು ಜಾರಿ ಬಗ್ಗೆ ನಿರ್ಧಾರ ಮಾಡಬೇಕಿದೆ. ಇಲ್ಲದಿದ್ರೆ ಕಾನೂನು ತನ್ನದೇ ಆದ ನಿರ್ಧಾರ ತೆಗೆದುಕೊಳ್ಳುವ ಅನಿವಾರ್ಯತೆ ಎದುರಾಗಲಿದೆ.

Related posts

ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಿ: ಮಹೇಶ್ವರ್ ರಾವ್.

admin

ಬೆಳೆ ಹಾನಿ ಬಗ್ಗೆ ಪರಿಶೀಲನೆಗೆ ನಾನೇ ಖುದ್ದು ಹೋಗ್ತೀನಿ.. ನೋಡ್ತೀನಿ.. ಗೌಡ್ರು..

Publicspot

SSLC ಫಲಿತಾಂಶ ಪ್ರಕಟ ಮತ್ತಷ್ಟು ವಿಳಂಬ.. ಹಠಕ್ಕೆ ಬಿದ್ದ ಸರ್ಕಾರ..

Publicspot

ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ

admin

ಹಂಪಿ ಉತ್ಸವಕ್ಕೆ ಸಿಎಂ ಚಾಲನೆ.. ಇವತ್ತು ಬಿಗ್‌ಬಾಸ್‌ ಗಿಲ್ಲಿಯದ್ದೇ ಕಾರುಬಾರು..

Publicspot

ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ.. ಅಧಿವೇಶನದಲ್ಲಿ ಚರ್ಚೆ.. 4 ದಿನದಲ್ಲಿ ವರದಿ..

Publicspot