The Public Spot
ಅಪರಾಧ

ಹೆಂಡತಿ ಜೊತೆಗೆ ಸ್ನೇಹಿತನ ಸಲುಗೆ.. ಪ್ರಶ್ನೆ ಮಾಡಿದ್ದಕ್ಕೆ ನಡೀತಾ ಮರ್ಡರ್..?​

ಕುಡಿದ ಅಮಲಿನಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಕಗ್ಗೊಲೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್​ ಠಾಣೆ ವ್ಯಾಪ್ತಿಯ ಕಡಬಗೆರೆ ಕ್ರಾಸ್​ನಲ್ಲಿ ನಡೆದಿರುವ ಭೀಕರ ಹತ್ಯೆ. 28 ವರ್ಷದ ವಿಜಯ್​​ ಕೊಲೆಯಾದ ಯುವಕ. ಮಾಗಡಿ ಮೂಲದ ವಿಜಯ್ ಕಡಬಗೆರೆ ಬಳಿ ವಾಸವಾಗಿದ್ದನು ಎನ್ನಲಾಗಿದೆ. ರಾತ್ರಿ ಮೂರ್ನಾಲ್ಕು ಜನ ಸೇರಿ ಪಾರ್ಟಿ ಮಾಡಿದ ಬಳಿಕ ಕಡಬಗೆರೆ ಕ್ರಾಸ್ ಬಳಿಯ ಜನಪ್ರಿಯ ಅಪಾರ್ಟ್​ಮೆಂಟ್​ ಬಳಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದು, ಬಾಲ್ಯದ ಗೆಳೆಯನೇ ವಿಜಯ್​ನನ್ನ ಕೊಲೆ ಮಾಡಿದ್ದಾನೆ ಅನ್ನೋದು ಗೊತ್ತಾಗಿದೆ.

ಪತ್ನಿ ಜೊತೆ ಆತ್ಮೀಯ ಸಲುಗೆ ಹೊಂದಿದ್ದನ್ನು ಪ್ರಶಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತ ವಿಜಯ್ ಪತ್ನಿ ಮೇಲೂ ಅನುಮಾನ ಮೂಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. 10 ವರ್ಷದ ಹಿಂದೆ ಆಶಾ ಎಂಬಾಕೆಯ ಜೊತೆ ಮದುವೆಯಾಗಿದ್ದ ವಿಜಯ್. ಧನಂಜಯ ಅಲಿಯಾಸ್​ ಜಯ, ವಿಜಯ ಇಬ್ಬರೂ ಬಾಲ್ಯ ಸ್ನೇಹಿತರು. ಮೂಲತ: ಮಾಗಡಿ ಮೂಲದವರಾಗಿದ್ದು, ಸುಂಕದಕಟ್ಟೆಯಲ್ಲಿ ವಾಸವಾಗಿದ್ರು. ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ವಿಜಯ್ ಹೆಂಡತಿ ಆಶಾ ಜೊತೆಗೆ ಸ್ನೇಹಿತ ಧನುಂಜಯ್ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಧನಂಜಯ್ ಮತ್ತು ಆಶಾ ಒಟ್ಟಿಗೆ ಇದ್ದ ಪೋಟೋಗಳು ಸಿಕ್ಕಿಬಿದ್ದಿದ್ದವು. ಜೊತೆಗೆ ಇಬ್ಬರೂ ಒಟ್ಟಿಗೆ ಇದ್ದಾಗಲೂ ಗಂಡನಿಗೆ ಸಿಕ್ಕಿಬಿದ್ದಿದ್ರು ಎನ್ನಲಾಗಿದೆ. ವಿಚಾರ ತಿಳಿದ ಬಳಿಕ ಗಲಾಟೆ ಮಾಡಿ, ಅಂತಿಮವಾಗಿ ಕಡಬಗೆರೆಯ ಮಾಚೋಹಳ್ಳಿ ಬಳಿ ಬಂದು ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದನು. ನಿನ್ನೆ ಸಂಜೆ ವೇಳೆಗೆ ಮನೆಯಿಂದ ಹೊರಟ ವಿಜಯ್, ಮಾಚೋಹಳ್ಳಿಯ ಡಿ-ಗ್ರೂಪ್ ಲೇಔಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೊಲೆ ಸಂಬಂಧ ಆಶಾಳನ್ನ ವಶಕ್ಕೆ ಪಡೆದಿರುವ ಮಾದನಾಯಕನಹಳ್ಳಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹೆಂಡತಿ ಜೊತೆಗೆ ಬಾಲ್ಯ ಸ್ನೇಹಿತ ಸಲುಗೆ ಹೊಂದಿದ್ರಿಂದ ಏರಿಯಾ ಬದಲಾವಣೆ ಮಾಡಿದ್ರೂ ಕೂಡ ಇಬ್ಬರ ನಡುವೆ ಅಕ್ರಮ ಸಂಬಂಧ ಮುಂದುವರಿದಿತ್ತಾ..? ಅನ್ನೋ ಬಗ್ಗೆ ತನಿಖೆ ನಡೆಯುತ್ತಿದೆ. ಆಶಾ ಹಾಗೂ ಧನಂಜಯ್ ಅಲಿಯಾಸ್​ ಜಯ ಒಟ್ಟಿಗೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿಸುತ್ತಿದೆ. ಆರೋಪಿಗಳು ನಿನ್ನೆ ಕಡಬಗೆರೆ ಕ್ರಾಸ್​ಗೆ ಬಂದು ಪಾರ್ಟಿ ಮಾಡಿ, ಆ ಬಳಿಕ ವಿಜಯ್​ನನ್ನು ಕರೆಸಿಕೊಂಡು ಕೊಲೆ ಮಾಡಿದ್ರಾ..? ಅನ್ನೋ ಅನುಮಾನದ ಮೇಲೆ ಪೊಲೀಸ್ರು ತನಿಖೆ ಮಾಡ್ತಿದ್ದಾರೆ. ಆದರೂ ಹೆಂಡತಿ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡವನನ್ನು ದೂರ ಇಟ್ಟರೂ ಅಕ್ರಮ ಸಂಬಂಧಕ್ಕೆ ಗಂಡನ ಕೊಲೆ ನಡೆದಿರುವುದು ವಿಪರ್ಯಾಸವೇ ಸರಿ.

Related posts

Film Actress Case; ಲಿವ್‌ ಇನ್‌ ರಿಲೇಷನ್‌.. ಆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌.. ಕೋರ್ಟ್‌ನಲ್ಲಿ ಜಾಮೀನು..

Publicspot

ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದೂ ಹುಡುಗಿಗೆ ನಡೀತ ಲವ್ ಜಿಹಾದ್..!​

Publicspot

ತರಬೇತಿ ಸರ್ಟಿಫಿಕೇಟ್‌‌ ಪಡೆಯಲು ಹೋದ ವೈದ್ಯೆ ಕೊಂದಿದ್ಯಾರು..?

Publicspot

ಬ್ಯಾಂಕ್ ಮ್ಯಾನೇಜರ್‌ನ ಮರ್ಡರ್ ಮಾಡಿದ್ಯಾಕೆ ಗಂಡ.. ಇಬ್ಬರು ಇಲ್ಲ ಇಬ್ಬರೂ ಅನಾಥ..

Publicspot

Bus Driver Ask Kiss for mobile charging: ಬಸ್​ ಡ್ರೈವರ್​ಗೆ ಬಿತ್ತು ಬೇಜಾನ್​ ಗೂಸಾ..

Publicspot

Suprem Court Guiding: ದರ್ಶನ್‌ ಬೇಲ್‌ ರದ್ದು ಮಾಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು..?

ಯಶವಂತಿ