The Public Spot
ರಾಜ್ಯ

T.B DAM GATE JAM : 6 ಗೇಟ್​ಗಳು ಕೆಲಸ ಮಾಡ್ತಿಲ್ಲ, ಮುರಿದು ಹೋಗುವ ಭೀತಿ..

ಕೊಪ್ಪಳದ ಟಿ.ಬಿ.ಡ್ಯಾಂ ಗೇಟ್‌ಗಳು ಮುರಿದು ಹೋಗುವ ಭಯ ಸೃಷ್ಟಿಯಾಗಿದೆ. ಒಂದಲ್ಲ.. ಎರಡಲ್ಲ.. ಬರೋಬ್ಬರಿ 6 ಟಿಬಿ ಡ್ಯಾಂ ಗೇಟ್‌ಗಳು ರಿಪೇರಿಗೆ ಬಂದಿವೆ. ತುಂಗಭದ್ರಾ ಜಲಾಶಯದ 6 ಗೇಟ್​ಗಳು ಕೆಲಸ ಮಾಡ್ತಿಲ್ಲ ಎಂದು ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಮಾಹಿತಿ ನೀಡಿದ್ದಾರೆ. ತುಂಗಾಭದ್ರ ಡ್ಯಾಂ ಗೇಟ್​ಗಳು ಆಪರೇಟ್ ಆಗದೆ ಹಿನ್ನೆಯಲ್ಲಿ ನೀರು ಬಿಡಲು ಆಗ್ತಿಲ್ಲ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ರೂ ಸ್ಪಂದಿಸ್ತಿಲ್ಲ ಎಂದು ದೂರಿದ್ದಾರೆ.

ತುಂಗಾಭದ್ರ ಡ್ಯಾಂನ ಗೇಟ್ ನಂಬರ್​ 11, 18, 20, 24, 27, 28ಗಳು ಕೆಲಸ ಮಾಡದೆ ಸ್ಥಗಿತಗೊಂಡಿವೆ. ಒಂದು ವೇಳೆ 1.5 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚು ನೀರು ಹರಿದು ಬಂದ್ರೆ ಸಮಸ್ಯೆ ಎದುರಾಗಲಿದೆ ಎಂದು ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ. ತುಂಗಭದ್ರಾ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದ ಅಧಿಕಾರಿಗಳಿರಬೇಕು. ಈ ಬಗ್ಗೆ ಕೇಂದ್ರಕ್ಕೆ ರಾಜ್ಯ ಮನವಿ ಮಾಡಿದ್ರೂ ಸ್ಪಂದಿಸಿಲ್ಲ ಎಂದು ದೂರಿದ್ದಾರೆ.

ಈಗಾಗಲೇ ಟಿಬಿ ಡ್ಯಾಂನ 19ನೇ ಗೇಟ್​ ಕಿತ್ತುಕೊಂಡು ಹೋಗಿತ್ತು. ಆಗ ತೆಲಂಗಾಣ, ಆಂಧ್ರ, ಹಾಗು ಕರ್ನಾಟಕ ಮೂರೂ ರಾಜ್ಯಗಳು ಒಟ್ಟುಗೂಡಿ ತಾತ್ಕಾಲಿಕವಾಗಿ ರಿಪೇರಿ ಮಾಡಲಾಗಿತ್ತು. ಆ ನಂತರ ಉಳಿದ ಎಲ್ಲಾ ಗೇಟ್​ಗಳನ್ನು ರಿಪೇರಿ ಮಾಡಬೇಕು ಎಂದು ತಿಳಿಸಲಾಗಿತ್ತು. ತಜ್ಞರು ಸಲಹೆ ನೀಡಿದ ಬಳಿಕವೂ ಕ್ರಸ್ಟ್​ ಗೇಟ್​ಗಳ ಬದಲಾವಣೆ ಮಾಡುವ ಕೆಲಸ ಬೇಸಿಗೆಯಲ್ಲೇ ಆಗಬೇಕಿತ್ತು. ಆದರೆ ಮಳೆಗಾಲ ಬಂದರೂ ಕ್ರಸ್ಟ್​ ಗೇಟ್​ಗಳ ಬದಲಾವಣೆ ಮಾಡಿಲ್ಲ.

ಇದೀಗ ಮತ್ತೆ 6 ಗೇಟ್​ಗಳು ಜಾಮ್​ ಆಗಿದ್ದು, ನೀರಿನ ಪ್ರಮಾಣ ಹೆಚ್ಚಾಗ್ತಿದ್ದ ಹಾಗೆ ಗೇಟ್​ಗಳು ಮುರಿದು ಹೋಗುವ ಸಾಧ್ಯತೆಯಿದೆ. ಒಂದು ವೇಳೆ ಗೇಟ್ ಮುರಿದು ಹೋದರೆ ಡ್ಯಾಂನಲ್ಲಿ ಸಂಗ್ರಹ ಇರುವ ನೀರು ಕೂಡ ಪೋಲಾಗುವ ಸಾಧ್ಯತೆಯಿದೆ. ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸ್ತಿಲ್ಲ ಅಂತಾ ಸಚಿವರು ದೂರಿದ್ದಾರೆ. ಆದರೆ ಕೇಂದ್ರದ ಮನವೊಲಿಕೆ ಮಾಡಿ ಕೆಲಸ ಮಾಡಿಸುವ ಕಾರ್ಯ ಮಾಡಬೇಕಿದೆ. ಇಲ್ಲದಿದ್ರೆ ಕಳೆದ ವರ್ಷದಂತೆ ಈ ವರ್ಷವೂ ಅನ್ನದಾತರು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆಯಿದೆ.

Related posts

Abhiman Studio: ಅಭಿಮಾನ್​ ಸ್ಟುಡಿಯೋ ವಶಕ್ಕೆ ಪಡೆದ ಸರ್ಕಾರ.. ಮತ್ತೆ ತಲೆ ಎತ್ತುತ್ತಾ ಸ್ಮಾರಕ..?

Publicspot

ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ, ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ

admin

ಈ ವರ್ಷ ಹಿಂದಿಗೆ ಅಂಕಗಳನ್ನೇ ನೀಡಿ.. ಸರ್ಕಾರಕ್ಕೆ ಮುಖಭಂಗ

Publicspot

ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ

admin

ರಾಜ್ಯದಲ್ಲಿ ಬೇಸಿಗೆ ಮಳೆ.. ಸಿಡಿಲಬ್ಬರಕ್ಕೆ ಜೀವ ಬಲಿ, ಮರ, ವಿಂಡ್‌ ಫ್ಯಾನ್‌‌ ಭಸ್ಮ..

Publicspot

ಹೈಕೋರ್ಟ್‌ ಆದೇಶಕ್ಕೆ ಮಣಿದ ಸರ್ಕಾರ.. ನಾಳೆಯೇ SSLC ರಿಸಲ್ಟ್‌

Publicspot