The Public Spot
ರಾಜಕೀಯರಾಜ್ಯ

ಬೃಹತ್ ಇ-ಖಾತಾ ಮೇಳಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವ

ಇ-ಖಾತಾ ಮೇಳವು ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಸದುದ್ದೇಶವನ್ನು ಹೊಂದಿರುವ ಅರ್ಥಪೂರ್ಣ ಕಾರ್ಯಕ್ರಮ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ ಶ್ರೀ ಬಿ.ಎಸ್.ಸುರೇಶ್ (ಭೈರತಿ) ರವರು ತಿಳಿಸಿದರು.

ಪಾಲಿಕೆಯ ಹೆಬ್ಬಾಳ‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್.ಟಿ.ನಗರದ ಹೆಚ್.ಎಮ್.ಟಿ ಮೈದಾನದಲ್ಲಿ ದಿನಾಂಕ 22 ಹಾಗೂ 23 ಜುಲೈ 2025 ರಂದು ಆಯೋಜಿಸಿರುವ ಬೃಹತ್ ಇ-ಖಾತಾ ಮೇಳಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ ಎಂದು ತಿಳಿಸಿದರು.

ಈಗಾಗಲೇ ಹೆಬ್ಬಾಳ‌ ವಿಧಾನಸಭಾ ಕ್ಷೇತ್ರದಲ್ಲಿ 50,000 ಸ್ವತ್ತುಗಳ ಪೈಕಿ 13,000 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ. ನಾಗರೀಕರು ಇ-ಖಾತಾ ಮೇಳದ ಸದುಪಯೋಗ ಪಡೆದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸುಲಭವಾಗಿ ಇ-ಖಾತಾವನ್ನು ಪಡೆಯುವಂತೆ ನಾಗರೀಕರಲ್ಲಿ ವಿನಂತಿಸಿದರು.

ಪೂರ್ವ ವಲಯದ ಆಯುಕ್ತರಾದ ಶ್ರೀಮತಿ ಸ್ನೇಹಲ್.ಆರ್ ರವರು ಮಾತನಾಡಿ ಪೂರ್ವ ವಲಯದಲ್ಲಿ ಇ-ಖಾತಾ ಮೇಳದ ಆಯೋಜನೆಯ ಮೂಲಕ‌ ಸುಲಭವಾಗಿ ಇ-ಖಾತಾ ನೀಡಲು ವ್ಯವಸ್ಥೆ ಮಾಡಲಾಗಿದೆ. ಪೂರ್ವ ವಲಯದಲ್ಲಿ ಒಟ್ಟು 3,45,858 ಸ್ವತ್ತುಗಳ ಪೈಕಿ 55,917 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ ಎಂದು ತಿಳಿಸಿದರು.

ಇ-ಖಾತಾ ಮೇಳದ‌ ಸೌಲಭ್ಯವನ್ನು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಆರ್.ಟಿ.ನಗರದ ಹೆಚ್.ಎಮ್.ಟಿ ಮೈದಾನದಲ್ಲಿ ಈ ಮೇಳವನ್ನು ನಾಳೆಯೂ ಮುಂದುವರೆಸಲಾಗುತ್ತದೆ. ಇ-ಖಾತಾ ಪಡೆಯಬೇಕಿರುವ ನಾಗರಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಇ-ಖಾತಾ ಪಡೆಯುವಂತೆ ಅವರು ತಿಳಿಸಿದರು.

ಈ ವೇಳೆ ಮಾಜಿ ಉಪ ಮಹಾಪೌರರು,
ವಲಯ ಆಯುಕ್ತರಾದ ಸ್ನೇಹಲ್.ಆರ್, ಜಂಟಿ ಆಯುಕ್ತರಾದ ಸರೋಜ, ಉಪ ಆಯುಕ್ತರಾದ ರಾಜು, ಕಂದಾಯ ಅಧಿಕಾರಿ ಶ್ರೀನಿವಾಸ್ ಮೂರ್ತಿ, ಕಾರ್ಯಪಾಲಕ ಅಭಿಯಂತರರು ಚಂದ್ರಶೇಖರ್, ಮಾಜಿ ಪಾಲಿಕೆ ಸದಸ್ಯರುಗಳು, ಸ್ಥಳೀಯ ಹಿರಿಯ ಮುಖಂಡರುಗಳು, ಹಾಗೂ‌ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಬಕಾರಿ ಇಲಾಖೆಯಲ್ಲಿ ಗೋಲ್ಮಾಲ್‌.. ಅಹೋರಾತ್ರಿ BJP – JDS ಧರಣಿ..

Publicspot

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು

admin

Hello Karge Here; ಬೆಳಗ್ಗೆ ಮನೆಗೆ ಬನ್ನಿ ಮಾತನಾಡ್ಬೇಕು..! ಸಿಎಂ ಮನವೊಲಿಸ್ತಾರಾ ಖರ್ಗೆ..?

Publicspot

ಈ ವರ್ಷ ಹಿಂದಿಗೆ ಅಂಕಗಳನ್ನೇ ನೀಡಿ.. ಸರ್ಕಾರಕ್ಕೆ ಮುಖಭಂಗ

Publicspot

ಸರ್ಕಾರ ಸಾಲ ತೀರಿಸಲು ಶಾಸಕರಿಂದ ಸಖತ್‌‌ ಐಡಿಯಾ..?

Publicspot

ಕಾಡು ಪ್ರಾಣಿಗಳು – ಮಾನವ ಸಂಘರ್ಷ ಹೆಚ್ಚಳ.. ಸರ್ಕಾರದ ಮುಂದಿನ ನಡೆ ಏನು..?

Publicspot